ಎಚ್ ಡಿ ದೇವೇಗೌಡ 
ರಾಜ್ಯ

ಬಡ್ತಿ ಹೊಂದಿದ ಸಹ ಶಿಕ್ಷಕರು,ಪದವಿ ಪೂರ್ವ ಉಪನ್ಯಾಸಕರಿಗೆ 6ನೇ ವೇತನ ಶಿಫಾರಸು ಅನುಷ್ಠಾನಗೊಳಿಸಲು ಎಚ್ ಡಿಡಿ ಒತ್ತಾಯ

ಬಡ್ತಿ ಹೊಂದಿದ ಸಹ ಶಿಕ್ಷಕರು ಮತ್ತು ಪದವಿಪೂರ್ವ ಉಪನ್ಯಾಸಕರಿಗೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಪರಿಹರಿಸುವ ಸಂಬಂಧ 6ನೇ ವೇತನ ಆಯೋಗದ ಶಿಫಾರಸ್ಸನ್ನು ಅನುಷ್ಠಾನಗೊಳಿಸುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೆಂಗಳೂರು: ಬಡ್ತಿ ಹೊಂದಿದ ಸಹ ಶಿಕ್ಷಕರು ಮತ್ತು ಪದವಿಪೂರ್ವ ಉಪನ್ಯಾಸಕರಿಗೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಪರಿಹರಿಸುವ ಸಂಬಂಧ 6ನೇ ವೇತನ ಆಯೋಗದ ಶಿಫಾರಸ್ಸನ್ನು ಅನುಷ್ಠಾನಗೊಳಿಸುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸೇವಾ ಜೇಷ್ಠತೆ ಮತ್ತು ವಿದ್ಯಾರ್ಹತೆಯ ಆಧಾರದ ಮೇಲೆ ಬಡ್ತಿ ಹೊಂದಿದ ಸಹ ಶಿಕ್ಷಕರು ಮತ್ತು ಪದವಿ ಪೂರ್ವ ಉಪನ್ಯಾಸಕರು ತಮ್ಮ ಜೊತೆಯಲ್ಲಿಯೇ ಸಮಾನ ವೃಂದದ ಸೇವೆಗೆ ಸೇರಿದ ಬಡ್ತಿ ಪಡೆಯದ ಶಿಕ್ಷಕರಿಗಿಂತ ಕಡಿಮೆ ಮೂಲ ವೇತನವನ್ನು ಹೊಂದಿರುವುದು ಸರಿಯಾದ ಕ್ರಮವಲ್ಲ.ಆರ್ಥಿಕ ಅನ್ಯಾಯಕ್ಕೆ ಒಳಗಾಗಿರುವ ಬಡ್ತಿ ಸಹ ಶಿಕ್ಷಕರು ಮತ್ತು ಉಪನ್ಯಾಸಕರ ವೇತನದಲ್ಲಿನ ತಾರತಮ್ಯವನ್ನು ಪರಿಹರಿಸುವ ಸಂಬಂಧ 6ನೇ  ವೇತನ ಆಯೋಗದ ವರದಿಯಲ್ಲಿ ಸ್ಪಷ್ಟವಾಗಿ ಶಿಫಾರಸ್ಸು ಮಾಡಲಾಗಿದೆ.

ಈ ಶಿಫಾರಸ್ಸನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವ ಮೂಲಕ ಬಡ್ತಿ ಉಪನ್ಯಾಸಕರು ಮತ್ತು ಸಹ ಶಿಕ್ಷಕರ ಜ್ವಲಂತ ಸಮಸ್ಯೆಯನ್ನು ನಿವಾರಿಸಲು ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ಮಾಜಿ ಪ್ರಧಾನಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT