ಎಚ್ ಡಿ ದೇವೇಗೌಡ 
ರಾಜ್ಯ

ಬಡ್ತಿ ಹೊಂದಿದ ಸಹ ಶಿಕ್ಷಕರು,ಪದವಿ ಪೂರ್ವ ಉಪನ್ಯಾಸಕರಿಗೆ 6ನೇ ವೇತನ ಶಿಫಾರಸು ಅನುಷ್ಠಾನಗೊಳಿಸಲು ಎಚ್ ಡಿಡಿ ಒತ್ತಾಯ

ಬಡ್ತಿ ಹೊಂದಿದ ಸಹ ಶಿಕ್ಷಕರು ಮತ್ತು ಪದವಿಪೂರ್ವ ಉಪನ್ಯಾಸಕರಿಗೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಪರಿಹರಿಸುವ ಸಂಬಂಧ 6ನೇ ವೇತನ ಆಯೋಗದ ಶಿಫಾರಸ್ಸನ್ನು ಅನುಷ್ಠಾನಗೊಳಿಸುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೆಂಗಳೂರು: ಬಡ್ತಿ ಹೊಂದಿದ ಸಹ ಶಿಕ್ಷಕರು ಮತ್ತು ಪದವಿಪೂರ್ವ ಉಪನ್ಯಾಸಕರಿಗೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಪರಿಹರಿಸುವ ಸಂಬಂಧ 6ನೇ ವೇತನ ಆಯೋಗದ ಶಿಫಾರಸ್ಸನ್ನು ಅನುಷ್ಠಾನಗೊಳಿಸುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸೇವಾ ಜೇಷ್ಠತೆ ಮತ್ತು ವಿದ್ಯಾರ್ಹತೆಯ ಆಧಾರದ ಮೇಲೆ ಬಡ್ತಿ ಹೊಂದಿದ ಸಹ ಶಿಕ್ಷಕರು ಮತ್ತು ಪದವಿ ಪೂರ್ವ ಉಪನ್ಯಾಸಕರು ತಮ್ಮ ಜೊತೆಯಲ್ಲಿಯೇ ಸಮಾನ ವೃಂದದ ಸೇವೆಗೆ ಸೇರಿದ ಬಡ್ತಿ ಪಡೆಯದ ಶಿಕ್ಷಕರಿಗಿಂತ ಕಡಿಮೆ ಮೂಲ ವೇತನವನ್ನು ಹೊಂದಿರುವುದು ಸರಿಯಾದ ಕ್ರಮವಲ್ಲ.ಆರ್ಥಿಕ ಅನ್ಯಾಯಕ್ಕೆ ಒಳಗಾಗಿರುವ ಬಡ್ತಿ ಸಹ ಶಿಕ್ಷಕರು ಮತ್ತು ಉಪನ್ಯಾಸಕರ ವೇತನದಲ್ಲಿನ ತಾರತಮ್ಯವನ್ನು ಪರಿಹರಿಸುವ ಸಂಬಂಧ 6ನೇ  ವೇತನ ಆಯೋಗದ ವರದಿಯಲ್ಲಿ ಸ್ಪಷ್ಟವಾಗಿ ಶಿಫಾರಸ್ಸು ಮಾಡಲಾಗಿದೆ.

ಈ ಶಿಫಾರಸ್ಸನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವ ಮೂಲಕ ಬಡ್ತಿ ಉಪನ್ಯಾಸಕರು ಮತ್ತು ಸಹ ಶಿಕ್ಷಕರ ಜ್ವಲಂತ ಸಮಸ್ಯೆಯನ್ನು ನಿವಾರಿಸಲು ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ಮಾಜಿ ಪ್ರಧಾನಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ