ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಒಳ ಮೀಸಲಾತಿ: ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಲು ಎಚ್ ಡಿಕೆ ಒತ್ತಾಯ 

ಒಳಮೀಸಲಾತಿ "ಸರ್ವರಿಗೂ ಸಮಪಾಲು ಸಮಬಾಳು" ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ  ರಾಜ್ಯ ಸರ್ಕಾರ  ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಬೆಂಗಳೂರು: ಒಳಮೀಸಲಾತಿ "ಸರ್ವರಿಗೂ ಸಮಪಾಲು ಸಮಬಾಳು" ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ  ರಾಜ್ಯ ಸರ್ಕಾರ  ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ತುಳಿತಕ್ಕೊಳಗಾದ ಎಲ್ಲಾ  ಜಾತಿಗಳಿಗೂ ಮೀಸಲಾತಿಯ ಫಲ ದಕ್ಕಬೇಕು ಎಂಬ ಸುಪ್ರೀಂ ಕೋರ್ಟಿನ ಆಶಯ ಒಳಮೀಸಲಾತಿಯ ಪರವಾದ ನಿಲುವೇ ಆಗಿದ್ದು, ಅದನ್ನು ಜಾರಿಗೊಳಿಸುವುದು ಸಾಮಾಜಿಕ ನ್ಯಾಯದ  ಪರಿಪಾಲನೆಯ ಕರ್ತವ್ಯವಾಗುತ್ತದೆ ಎಂದು ಅವರು ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

ಮೇಲ್ಜಾತಿಯಲ್ಲಿನ ಬಡವರಿಗೆ  ಶೇ.10ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಕೇಂದ್ರದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳಲ್ಲಿನ ಅವಕಾಶ ವಂಚಿತರಿಗೆ  ಒಳಮೀಸಲಾತಿ ಜಾರಿಗೆ ತರಬಾರದೇಕೆ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಸ್ವತಃ ಹಿಂದುಳಿದವರ್ಗದವರೇ ಆಗಿರುವ ಪ್ರಧಾನಿಗಳು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸುವ ಮೂಲಕ ಸಮಬಾಳು-ಸಮಪಾಲು ಎಂಬ ತತ್ವವನ್ನು ಎತ್ತಿಹಿಡಿಯಬೇಕಾಗಿದೆ. ಶೋಷಿತ ವರ್ಗದಲ್ಲೂ ಸ್ಪೃಶ್ಯ ಸಮುದಾಯ ಅಸ್ಪೃಶ್ಯರನ್ನು ಹತ್ತಿರ ಬಿಟ್ಟು ಕೊಳ್ಳದ ಪರಿಸ್ಥಿತಿ ಈಗಲೂ ಇದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT