ಶಿವಾನಿ ಆನೆ 
ರಾಜ್ಯ

ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಮರಿಗೆ ನಾಮಕರಣ, ಹೆಸರು ಶಿವಾನಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇಗುಲದ ಆನೆ ಲಕ್ಷ್ಮೀಗೆ ಜನಿಸಿದ ಆನೆ ಮರಿಗೆ ಇಂದು ನಾಮಕರಣ ಶಾಸ್ತ್ರ ನಡೆಸಲಾಗಿದ್ದು, ಆನೆ ಮರಿಗೆ ಶಿವಾನಿ ಎಂದು ಹೆಸರಿಡಲಾಗಿದೆ.

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇಗುಲದ ಆನೆ ಲಕ್ಷ್ಮೀಗೆ ಜನಿಸಿದ ಆನೆ ಮರಿಗೆ ಇಂದು ನಾಮಕರಣ ಶಾಸ್ತ್ರ ನಡೆಸಲಾಗಿದ್ದು, ಆನೆ ಮರಿಗೆ ಶಿವಾನಿ ಎಂದು ಹೆಸರಿಡಲಾಗಿದೆ.

ಕಳೆದ‌ ಜುಲೈ1 ರಂದು ದೇಗುಲದ ಆನೆ ಲಕ್ಷ್ಮೀ ಹೆಣ್ಣು ಮರಿಗೆ ಜನ್ಮ ನೀಡಿತ್ತು. ಆ ಆನೆ ಮರಿಯ ನಾಮಕರಣ ಆ.31 ರಂದು ಅಂದರೆ ಇಂದು ತುಲಾ ಲಗ್ನ ಮುಹೂರ್ತದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಆನೆ ಮರಿಗೆ ಶ್ರೀ ದೇವರ ಪ್ರಸಾದ ನೀಡಿ, ಗಂಟೆ  ಕಟ್ಟುವ ಮೂಲಕ ವಿಧಿ ನೆರವೇರಿಸಿದರು.

ಈ ವೇಳೆ ಈ ಹೆಣ್ಣು ಆನೆ ಮರಿಗೆ ಶಿವಾನಿ ಎಂದು ಹೆಸರಿಡಲಾಗಿದೆ. ಧರ್ಮಸ್ಥಳದ ಡಾ.ಡಿ.ಹೆಗ್ಗಡೆ ಮೊಮ್ಮಗಳು ಮಾನ್ಯ ಅವರು ಶಿವಾನಿ ಹೆಸರು ಉದ್ಘೋಶಿಸುವ ಮೂಲಕ ನಾಮಕರಣ ಮಾಡಿದರು. ಇದೇ ವೇಳೆ ಶ್ರೀಧಾಮ‌ ಮಾಣಿಲದ ಮೋಹನದಾಸ ಸ್ವಾಮೀಜಿ ಆನೆಯ ಮಾವುತ ಕೃಷ್ಣರಿಗೆ ಸನ್ಮಾನ  ನೆರವೇರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮದು 4ನೇ ಅತಿದೊಡ್ಡ ಆರ್ಥಿಕತೆ ಎಂದು ಭಾರತ ಹೇಳಿಕೊಳ್ಳುತ್ತಿದೆ; ಆದರೆ ತಲಾವಾರು ಜಿಡಿಪಿ 12 ಪಟ್ಟು ಕಡಿಮೆ!

BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ

ಬೆಂಗಳೂರು: ಐದನೇ ಮಹಡಿಯಿಂದ ಜಿಗಿದು ಬಯೋಕಾನ್ ಉದ್ಯೋಗಿ ಆತ್ಮಹತ್ಯೆ!

ಪೀರಿಯಡ್ಸ್ ಸಮಯದಲ್ಲೂ ಸೆ* ಗೆ ಒತ್ತಾಯ, ಅಶ್ಲೀಲ ವಿಡಿಯೋ ನೋಡಿ ಲೈಂಗಿಕ ಕಿರುಕುಳ.. ಸೈಕೋ ಪತಿ ವಿರುದ್ಧ ಪತ್ನಿ ದೂರು!

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

SCROLL FOR NEXT