ಪ್ರಭು ಚವ್ಹಾಣ್ 
ರಾಜ್ಯ

ಗೋಹತ್ಯೆ ನಿಷೇಧ ಅಧ್ಯಯನಕ್ಕಾಗಿ ಗುಜರಾತ್, ಉತ್ತರ ಪ್ರದೇಶಕ್ಕೆ ಸಚಿವ ಪ್ರಭು ಚವ್ಹಾಣ್ ಭೇಟಿ

ಗೋಹತ್ಯೆ ನಿಷೇಧ ರಾಜ್ಯದಲ್ಲಿ ಮತ್ತಷ್ಟು ಬಲಗೊಳಿಸಲು ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿನ ಕಾನೂನುಗಳ ಅಧ್ಯಯನಕ್ಕಾಗಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ನೇತೃತ್ವದ ತಂಡ ಬುಧವಾರದಿಂದ ಈ ಎರಡೂ ರಾಜ್ಯಗಳಿಗೆ ತೆರಳಲಿದೆ.

ಬೆಂಗಳೂರು: ಗೋಹತ್ಯೆ ನಿಷೇಧ ರಾಜ್ಯದಲ್ಲಿ ಮತ್ತಷ್ಟು ಬಲಗೊಳಿಸಲು ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿನ ಕಾನೂನುಗಳ ಅಧ್ಯಯನಕ್ಕಾಗಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ನೇತೃತ್ವದ ತಂಡ ಬುಧವಾರದಿಂದ ಈ ಎರಡೂ ರಾಜ್ಯಗಳಿಗೆ ತೆರಳಲಿದೆ.

ಸಚಿವರ ಜತೆಯಲ್ಲಿ ಇಲಾಖೆಯ ಉನ್ನತ ಅಧಿಕಾರಿಗಳು ಸಹ ಭೇಟಿ ನೀಡಲಿದ್ದಾರೆ. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ಮಸೂದೆ ಮಂಡನೆ ಮಾಡಲಿದ್ದು, ಅದಕ್ಕೆ ಬೇಕಾದ ಎಲ್ಲ ತಯಾರಿಯನ್ನು ಮಾಡಿಕೊಳ್ಳಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಈಗಾಗಲೇ ಉತ್ತರ ಪ್ರದೇಶ ಮತ್ತು ಗುಜರಾತ್ ನಲ್ಲಿ ಗೋಹತ್ಯೆ ಕಾಯ್ದೆ ಅನುಷ್ಠಾನ ಮಾಡಲಾಗಿದ್ದು, ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು ಪಶುಸಂಗೋಪನೆ ಇಲಾಖೆಯ ಸಚಿವರು ಮುಂದಾಗಿದ್ದಾರೆ.

ಈ ಎರಡೂ ರಾಜ್ಯಗಳಲ್ಲಿ ಕಾಯ್ದೆಯ ಅನುಷ್ಟಾನ, ನಿರ್ವಹಣೆ ಮತ್ತು ಗೋಶಾಲೆಗಳಿಗೆ ಭೇಟಿ ಮಾಡಿ ಗೋವುಗಳ ರಕ್ಷಣೆ ಮತ್ತು ಅವುಗಳ ಆರೈಕೆಗಾಗಿ ಈ ರಾಜ್ಯಗಳಲ್ಲಿ ಕೈಗೊಂಡ ಕ್ರಮಗಳನ್ನು ಅಲ್ಲಿನ ಪಶುಸಂಗೋಪನೆ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

ಸಚಿವ ಪ್ರಭು ಚವ್ಹಾಣ್ ನೇತೃತ್ವದ ತಂಡ ಡಿಸೆಂಬರ್ 2 ರಿಂದ 4ರ ವರೆಗೆ ಉತ್ತರ ಪ್ರದೇಶದ ಲಖನೌ, ಗುಜಾರತ್ ನ ಗಾಂಧಿನಗರಕ್ಕೆ ಭೇಟಿ ನೀಡಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT