ಸಂಗ್ರಹ ಚಿತ್ರ 
ರಾಜ್ಯ

ರೈತರ 'ದೆಹಲಿ ಚಲೋ' ಪ್ರತಿಭಟನೆಗೆ ಬೆಂಬಲ; ಹೊಸಪೇಟೆ-ಬಳ್ಳಾರಿ‌ ಹೆದ್ದಾರಿಯಲ್ಲಿ‌ ರಸ್ತೆ ತಡೆದು ಪ್ರತಿಭಟನೆ

ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಹಾಗೂ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಧರಣಿಯನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು‌ ಸೇನೆಯ ಕಾರ್ಯಕರ್ತರು ಹೊಸಪೇಟೆ-ಬಳ್ಳಾರಿ‌ ಹೆದ್ದಾರಿಯಲ್ಲಿ‌ ರಸ್ತೆತಡೆದು ಬುಧವಾರ ಪ್ರತಿಭಟನೆ ನಡೆಸಿದರು.

ಹೊಸಪೇಟೆ: ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಹಾಗೂ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಧರಣಿಯನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು‌ ಸೇನೆಯ ಕಾರ್ಯಕರ್ತರು ಹೊಸಪೇಟೆ-ಬಳ್ಳಾರಿ‌ ಹೆದ್ದಾರಿಯಲ್ಲಿ‌ ರಸ್ತೆತಡೆದು ಬುಧವಾರ ಪ್ರತಿಭಟನೆ ನಡೆಸಿದರು.

ನವದೆಹಲಿಯಲ್ಲಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು .

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್ ಮಾತನಾಡಿ, ಕೋವಿಡ್ -19 ಲಾಕ್‌ ಡೌನ್‌ ಸಮಯದಲ್ಲಿ ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ಜಾರಿಗೆ ತಂದಿದೆ. ಇದನ್ನು ವಿರೋಧಿಸಿ ಪಂಜಾಬ್, ಹರಿಯಾಣ ಸೇರಿ ದೇಶದ ವಿವಿಧ ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ತಕ್ಕ ಸ್ಪಂದನೆ ಸರ್ಕಾರದಿಂದ ಸಿಗುತ್ತಿಲ್ಲ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

BJP ಸೇರಿದ 7 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಉಪರಾಷ್ಟ್ರಪತಿಗೆ AAP ಪತ್ರ: ಸಂಜಯ್ ಸಿಂಗ್

ಅರಮನೆಯಂತಾದ 'ಕಾಮನ್​ ಮ್ಯಾನ್'​​ ಕೇಜ್ರಿವಾಲ್​ ನಿವಾಸ: Sheesh Mahal 2 ಎಂದು BJP ಟೀಕೆ; AAP ಮಾನನಷ್ಟ ಮೊಕದ್ದಮೆ ಎಚ್ಚರಿಕೆ! Video

ಕಾಂತಾರ ಮಿಮಿಕ್ರಿ ವಿವಾದ: ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್‌ ಭೇಟಿಗೆ ಹೈಕೋರ್ಟ್ ಸೂಚನೆ; ಅರ್ಜಿ ಇತ್ಯರ್ಥ!

ಬೆದರಿಕೆ ರಾಜಕಾರಣದ ವಿರುದ್ಧ ಅಂತಿಮವಾಗಿ ಗೆಲ್ಲುವುದು ನ್ಯಾಯವೇ: ಪವನ್ ಖೇರಾ ಬೆನ್ನಿಗೆ ನಿಂತ ಕಾಂಗ್ರೆಸ್

Love sex aur dhokha: ಪ್ರೀತಿ ನೆಪದಲ್ಲಿ ದೈಹಿಕ ಸಂಬಂಧ, ಹಲ್ಲೆ.. ಗರ್ಭಿಣಿ ಎಂದು ತಿಳಿಯುತ್ತಲೇ ನಾಪತ್ತೆಯಾದ ಭೂಪ!

SCROLL FOR NEXT