ವರ್ತೂರು ಪ್ರಕಾಶ್ 
ರಾಜ್ಯ

ಗೃಹ ಸಚಿವರು, ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವರ್ತೂರು ಪ್ರಕಾಶ್; ಭದ್ರತೆ ಒದಗಿಸುವಂತೆ ಮನವಿ

ದುಷ್ಕರ್ಮಿಗಳಿಂದ ಅಪಹರಣಕ್ಕೆ ಒಳಲಾಗಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಘಟನೆಯ ಬಗ್ಗೆ ವಿಸ್ತೃತವಾಗಿ ವಿವರಿಸಿದ್ದಾರೆ.

ಬೆಂಗಳೂರು: ದುಷ್ಕರ್ಮಿಗಳಿಂದ ಅಪಹರಣಕ್ಕೆ ಒಳಲಾಗಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಘಟನೆಯ ಬಗ್ಗೆ ವಿಸ್ತೃತವಾಗಿ ವಿವರಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಕುಟುಂಬಕ್ಕೆ ಜೀವ ಬೆದರಿಕೆಯಿದ್ದು, ತಮಗೆ ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸಬೇಕು ಎಂದು‌ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಲ್ಲಿ ಮನವಿ‌ ಮಾಡಿದ್ದೇನೆ ಎಂದು ತಿಳಿಸಿದರು.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಮಾತನಾಡಿದ್ದೇನೆ. ಪ್ರಕರಣ ನಡೆದ ಬಗ್ಗೆ ಅವರಿಗೆ ವಿವರಿಸಿದ್ದೇನೆ. ತಮಗೆ ಮತ್ತು ಮಕ್ಕಳಿಗೆ ರಕ್ಷಣೆ ಬೇಕು ಎಂದು ಕೇಳಿದ್ದೇನೆ ಎಂದು ತಿಳಿಸಿದರು.

ಡಿಸಿಪಿ ದೇವರಾಜ್ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚನೆ
ಈ ನಡುವೆ ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣವನ್ನು ಭೇದಿಸಲು ವೈಟ್ ಫೀಲ್ಡ್ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಮಾಜಿ ಸಚಿವ ವರ್ತೂರು ಪ್ರಕಾಶ್ ಫಾರ್ಮ್ ಹೌಸ್ನಿಂದ ಬರುವಾಗ ಅಪಹರಿಸಿರುವುದಾಗಿ ದೂರಿನಲ್ಲಿ ಅವರು ತಿಳಿಸಿದ್ದು, ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಪಹರಣ ಸ್ಥಳ ಪರಿಶೀಲನೆ, ಅವರನ್ನು ಕಡೆಯದಾಗಿ ಅಪಹರಣಕಾರರು ಇಳಿಸಿದ ಹೊಸಕೋಟೆಯ ಶಿವನಾಪುರ ಬಳಿ ಸ್ಥಳ ಪರಿಶೀಲನೆ ಹಾಗೂ ಕಾರು ಪತ್ತೆಯಾದ ಬೆಳ್ಳಂದೂರು ಠಾಣಾ ವ್ಯಾಪ್ತಿಯ ಸ್ಥಳದಲ್ಲಿ ಪರಿಶೀಲನೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. 

30 ಕೋಟಿ ರೂ.ಹಣಕ್ಕಾಗಿ ತನ್ನನ್ನು ಅಪಹರಿಸಲಾಗಿತ್ತು: ವರ್ತೂರು ಪ್ರಕಾಶ್ 
ತಮ್ಮನ್ನು ಹಣಕ್ಕಾಗಿ ಅಪಹರಿಸಿ, ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ವರ್ತೂರು ಪ್ರಕಾಶ್ ಬೆಳ್ಳಂದೂರು ಠಾಣೆಗೆ ದೂರು ನೀಡಿದ್ದಾರೆ.

ಹಣಕ್ಕಾಗಿ ದರೋಡೆಕೋರರ ತಂಡವೊಂದು ಕಾರಿನಲ್ಲಿ ಹೋಗುತ್ತಿದ್ದ ತಮ್ಮನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿಟ್ಟು ಚಿತ್ರಹಿಂಸೆ ನೀಡಿದೆ. ಈ ತಂಡ 30 ಕೋಟಿ ರೂ.ಹಣಕ್ಕಾಗಿ ಬೇಡಿಕೆ ಇಟ್ಟಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕೋಲಾರದ ಬೆಗ್ಲಿಹೊಸಹಳ್ಳಿ ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ ಬಳಿ ಕಾರು ಚಾಲಕ ಸುನೀಲ್ ಸಮೇತ ತಮ್ಮನ್ನು ನವೆಂಬರ್ 25ರಂದು ದುಷ್ಕರ್ಮಿಗಳ ತಂಡ ಅಪಹರಣ ಮಾಡಿದೆ. ನಂತರ ಕೈ ಕಾಲು ಕಟ್ಟಿ ಚಿತ್ರಹಿಂಸೆ ನೀಡಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದೆ. ಬಿಡುಗಡೆ ಮಾಡಲು 30 ಕೋಟಿ ರೂ.ಗೆ ತಂಡ ಬೇಡಿಕೆ ಇಟ್ಟಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT