ಸಂಗ್ರಹ ಚಿತ್ರ 
ರಾಜ್ಯ

ಮೊಸಳೆ ದಾಳಿಗೆ ಯುವಕ ಬಲಿ: ಬಾಲಕನ ತಲೆ ಬುರುಡೆ ಮಾತ್ರ ಪತ್ತೆ

ಕೃಷ್ಣ ನದಿಯಲ್ಲಿ‌ ಮೊಸಳೆಯೊಂದು ಬಾಲಕನ ಮೇಲೆ ದಾಳಿ ಮಾಡಿ ಬಲಿಪಡೆದಿರುವ ಮನಕಲಕುವ ಘಟನೆ ಜಿಲ್ಲೆಯ ಡೊಂಗಾರಾಂಪುರ ಗ್ರಾಮದಲ್ಲಿ ವರದಿಯಾಗಿದೆ.

ರಾಯಚೂರು: ಕೃಷ್ಣ ನದಿಯಲ್ಲಿ‌ ಮೊಸಳೆಯೊಂದು ಬಾಲಕನ ಮೇಲೆ ದಾಳಿ ಮಾಡಿ ಬಲಿಪಡೆದಿರುವ ಮನಕಲಕುವ ಘಟನೆ ಜಿಲ್ಲೆಯ ಡೊಂಗಾರಾಂಪುರ ಗ್ರಾಮದಲ್ಲಿ ವರದಿಯಾಗಿದೆ.

12 ವರ್ಷದ ಮಲ್ಲಿಕಾರ್ಜುನ ಮೊಸಳೆಗೆ ಬಲಿಯಾದ ದುರ್ದೈವಿ. ಬುಧವಾರ ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ತೆರಳಿದ್ದನು. ಈ ವೇಳೆ ನೀರು‌ ಕುಡಿಯಲು ಆತ ಕೃಷ್ಣ ನದಿಗೆ ಇಳಿದಿದ್ದ. ಆಗ ಮೊಸಳೆಯೊಂದು ಆತನ ಮೇಲೆ ದಾಳಿ ಮಾಡಿ ಎಳೆದೊಯ್ದಿದೆ. ಇದನ್ನು ಕಣ್ಣಾರೆಕಂಡ ಮಲ್ಲಿಕಾರ್ಜುನ್ ಸ್ನೇಹಿತರು ತಕ್ಷಣವೇ ವಿಷಯವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳೀಯ ಮೀನುಗಾರರ ಎರಡು ತೆಪ್ಪ ಬಳಸಿ ಮಲ್ಲಿಕಾರ್ಜುನನಿಗಾಗಿ ಶೋಧಕಾರ್ಯ ನಡೆಸಿದರು ಬಾಲಕ ಸುಳಿವು ಪತ್ತೆಯಾಗಲಿಲ್ಲ. 

ಬುಧವಾರ ರಾತ್ರಿ ಬಾಲಕನ ತಲೆ ಬುರುಡೆ ದೊರೆತಿದ್ದು, ಮೊಸಳೆ ಬಾಲಕನ ಇಡೀ ದೇಹವನ್ನು ಸಂಪೂರ್ಣವಾಗಿ ತಿಂದು ಹಾಕಿದೆ. 

ವಿದ್ಯಾಗಮ ಯೋಜನೆ ಸದ್ಯ ಬಂದ್ ಆದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ನಿತ್ಯ ಕೂಲಿ ಕೆಲಸಕ್ಕೆ ತೆರಳುತ್ತಿದ್ದ. ಆದರೆ, ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ‌ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ನಿನ್ನೆ ಕೂಲಿ ಕೆಲಸ ಬಿಟ್ಟು ದನ ಕಾಯಲು ತೆರಳಿದ್ದ. ಮಧ್ಯಾಹ್ನ ಉಟ ಮಾಡಿ ನದಿ ದಂಡೆಯಲ್ಲಿ ನೀರು ಕುಡಿಯಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಾಪಲದಿನ್ನಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT