ಪೊನ್ನಂಪೇಟೆಯ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ. ಸಿ. ಪಾಟೀಲ್ 
ರಾಜ್ಯ

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಸಚಿವ ಬಿ.ಸಿ ಪಾಟೀಲ್ ಕ್ಷಮೆಯಾಚನೆಗೆ ಒತ್ತಾಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜೊತೆಗಿನ ಸಂಘರ್ಷದಿಂದ ಸಹಸ್ರಾರು ರೈತರು ರಾಷ್ಟ್ರ ರಾಜಧಾನಿಯ ಬೀದಿಗಿಳಿದಿರುವಂತೆಯೇ, ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳುವ ಮೂಲಕ ಕೃಷಿ ಸಚಿವ ಬಿ.ಸಿ. ಪಾಟೀಲ್ ಅನಗತ್ಯ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ಮಡಿಕೇರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜೊತೆಗಿನ ಸಂಘರ್ಷದಿಂದ ಸಹಸ್ರಾರು ರೈತರು ರಾಷ್ಟ್ರ ರಾಜಧಾನಿಯ 
ಬೀದಿಗಿಳಿದಿರುವಂತೆಯೇ, ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳುವ ಮೂಲಕ ಕೃಷಿ ಸಚಿವ ಬಿ.ಸಿ. ಪಾಟೀಲ್ ಅನಗತ್ಯ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ಪೊನ್ನಂಪೇಟೆಯ ಅರಣ್ಯ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಸಿ. ಪಾಟೀಲ್, ಚಿನ್ನದ ಅಭರಣಗಳನ್ನು ಧರಿಸಿದ ಮಹಿಳೆಯೊಬ್ಬರನ್ನು ಭೇಟಿಯಾಗಿ ಮಾತನಾಡಿಸಿದಾಗ, ಅಭರಣಗಳು ಭೂಮಿಯಿಂದ ಬಂದದ್ದು, ಹೊಲಗಳಲ್ಲಿ 35 ವರ್ಷಗಳಿಂದ ಬೇಸಾಯ ಮಾಡಿ ಇವುಗಳನ್ನು ಹೊಂದಲು ಸಾಧ್ಯವಾಯಿತು ಎಂದು ಹೇಳಿದರು. ಮಹಿಳೆಯರು ಕೃಷಿಯಿಂದ ಲಾಭ ಪಡೆಯುತ್ತಿರುವಾಗ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳಬೇಕು, ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳು, ನಿಜವಾದ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದರು.

ಹೈನುಗಾರಿಕೆ, ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಬೇಕು, ಭತ್ತ ಬೆಳೆಗೆ ಉತ್ತಮ ಬೆಲೆ ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಆದಾಗ್ಯೂ, ಆತ್ಮಹತ್ಯೆ ಕುರಿತು ಅವರು ನೀಡಿರುವ ಹೇಳಿಕೆಗೆ ರೈತ ಸಮುದಾಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT