ಡಿ ಜೆ ಹಳ್ಳಿ ಗಲಭೆ ಪ್ರಕರಣ 
ರಾಜ್ಯ

ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ರಾಕಿಬ್ ಜಾಕಿರ್ ಬಂಧನ

ಡಿಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಳೆದ ರಾತ್ರಿ ಕಾರ್ಪೊರೇಟರ್ ರಾಕಿಬ್ ಜಕೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಡಿಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಳೆದ ರಾತ್ರಿ ಕಾರ್ಪೊರೇಟರ್ ರಾಕಿಬ್ ಜಾಕೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಬಂಧಿಸಲಾಗಿತ್ತು. ಈಗ ಕಾಂಗ್ರೆಸ್ ಕಾರ್ಪೊರೇಟರ್ ಜಾಕೀರ್ ನನ್ನು ಬಂಧಿಸುವ ಮೂಲಕ ಮಹತ್ವದ ಬೆಳವಣಿಗೆಯಾಗಿದೆ. ಸಂಪತ್ ರಾಜ್ ಗಲಭೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

ರಾಕಿಬ್ ಜಾಕೀರ್ ಪುಲಕೇಶಿನಗರ ವಾರ್ಡ್ ನ ಮಾಜಿ ಕಾರ್ಪೊರೇಟರ್. ಈತ ಡಿ ಜೆ ಹಳ್ಳಿ, ಕೆ ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಹೇಳಲಾಗುತ್ತಿದೆ. ಸಿಸಿಬಿ ಪೊಲೀಸರು ಈತನಿಗೆ ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದರು. ಒಮ್ಮೆ ವಿಚಾರಣೆಗೆ ಹಾಜರಾಗಿದ್ದ ಜಾಕೀರ್ ಬಳಿಕ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ. 

ಜಾಕೀರ್ ಇರುವಿಕೆಯ ಸುಳಿವು ಪಡೆದ ಸಿಸಿಬಿ ಪೊಲೀಸರು ನಿನ್ನೆ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT