ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಪ್ರಭು ಚೌಹಾಣ್ 
ರಾಜ್ಯ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ: ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಪ್ರಭು ಚೌಹಾಣ್

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿ‌ ಕುರಿತು ಪರ ಹಾಗೂ ವಿರೋಧದ ಚರ್ಚೆ ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿ‌ ಕುರಿತು ಪರ ಹಾಗೂ ವಿರೋಧದ ಚರ್ಚೆ ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

ಇದೇ ಡಿಸೆಂಬರ್ 7 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು, ಅದಕ್ಕೆ ಬೇಕಾದ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮತ್ತು ಗುಜರಾತ್ ಗೆ ತೆರಳಿರುವ ಸಚಿವ ಪ್ರಭು ಚೌಹಾಣ್  ಸಿಎಂ ಯೋಗಿ ಆದಿತ್ಯ ನಾಥ್ ಅವರನ್ನು ಭೇಟಿ ಮಾಡಿದ್ದಾರೆ, ಉತ್ತರ ಪ್ರದೇಶದಲ್ಲಿ ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ, ಅತ್ಯಂತ ಕಠಿಣ ಕ್ರಮಗಳನ್ನು ಜರುಗಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆ ಯಶಸ್ವಿಯಾಗಿದೆ. ಕರ್ನಾಟಕ ಸರ್ಕಾರವೂ ಇದೇ ಮಾದರಿ ಕಾಯ್ದೆ ಜಾರಿಗೊಳಿಸಲು ಮಂದಾಗಿರುವುದಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಸಂತಸ ವ್ಯಕ್ತ ಪಡಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯಿದೆ ಉತ್ತರ ಪ್ರದೇಶದಲ್ಲಿ ಅನುಷ್ಠಾನವಾದ ರೀತಿ ಬಗ್ಗೆ ಪ್ರಭು ಚವಾಣ್ ಅಲ್ಲಿನ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದರು, ಈ ಸಂದರ್ಭದಲ್ಲಿ ಗೋ ಶಾಲೆಗಳ ನಿರ್ವಹಣೆ ಮತ್ತು ಗೋವುಗಳ ಆರೈಕೆ ಬಗ್ಗೆ ಅವರು ಮಾಹಿತಿ ಪಡೆದರು.

1964 ರ ಕರ್ನಾಟಕ ಗೋವುಗಳ ವಧೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಕರ್ನಾಟಕದಲ್ಲಿ ಗೋಹತ್ಯೆಯನ್ನು ಈಗಾಗಲೇ ನಿಷೇಧಿಸಲಾಗಿದೆ. ಸರ್ಕಾರ ಪರಿಚಯಿಸಲು ಉದ್ದೇಶಿಸಿರುವ ಹೊಸ ಮಸೂದೆಯನ್ನು 2008 ರಲ್ಲಿ ಉಭಯ ಸದನಗಳು ಅಂಗೀಕರಿಸಿದವು, ಆದರೆ ನಂತರ ಅದನ್ನು ಕಾಂಗ್ರೆಸ್ ಸರ್ಕಾರ ಹಿಂತೆಗೆದುಕೊಂಡಿತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

Sex Video ಪ್ರಕರಣ: ಡಿಸಿಎಂಗೆ 17 ಬಾರಿ ಕರೆ ಮಾಡಿದ ಸ್ವಯಂ ಘೋಷಿತ 'ದೇವಮಾನವ'; CDR ಬಿಡುಗಡೆ

SCROLL FOR NEXT