ಬೆಂಗಳೂರು: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಸಬ್ ಇನ್ಸ್ ಪೆಕ್ಟರ್ ರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲದ ಬಳಿ ನಡೆದಿದೆ.
ಬಾಗಲುಕುಂಟೆಯ ನಿವೃತ್ತ ಪಿಎಸ್ ಐ ರಾಮಮೂರ್ತಿ(61)ಮೃತಪಟ್ಟವರು. ಕಳೆದ ಜನವರಿಯಲ್ಲಿ ಅವರು ಸೇವೆಯಿಂದ ನಿವೃತ್ತರಾಗಿದ್ದರು.
ರಾಮಮೂರ್ತಿ ಅವರು ಬೈಕ್ ನಲ್ಲಿ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲದ ಬೂದಿಹಾಳ್ ಗೇಟ್ ಬಳಿ ಹೋಗುತ್ತಿದ್ದಾಗ ವೇಗವಾಗಿ ಬಂದ ಲಾರಿ ಅವರ ಬೈಕ್ ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಕೆಳಕ್ಕೆ ಬಿದ್ದ ರಾಮಮೂರ್ತಿ ಅವರ ತಲೆಯ ಮೇಲೆ ಚಕ್ರ ಹರಿದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಲಾರಿ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.