ಹೈಕೋರ್ಟ್ 
ರಾಜ್ಯ

ಕರ್ನಾಟಕ ಬಂದ್ ನಿಂದ ಸಣ್ಣ ವ್ಯಾಪಾರಿಗಳಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆಗುವ ನಷ್ಟವನ್ನು ಆಯೋಜಕರೇ ಭರಿಸಬೇಕಾಗುತ್ತೆ: ಹೈಕೋರ್ಟ್

ಸಣ್ಣ ವ್ಯಾಪಾರಿಗಳು ಮತ್ತು ರಸ್ತೆ ಬದಿ ವ್ಯಾಪಾರಿಗಳು ಈಗಾಗಲೇ ಕೋವಿಡ್-19 ಸಾಂಕ್ರಾಮಿಕ, ಲಾಕ್ ಡೌನ್ ನಿಂದ ಸಾಕಷ್ಟು ತೊಂದರೆ ಅನುಭವಿಸಿದ್ದು ಶನಿವಾರ ನಡೆಯುವ ಕರ್ನಾಟಕ ಬಂದ್ ನಿಂದ ಉಂಟಾಗುವ ನಷ್ಟವನ್ನು ಆಯೋಜಕರೇ ಭರಿಸುವ ಬಗ್ಗೆ ಪರಿಗಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಬೆಂಗಳೂರು: ಸಣ್ಣ ವ್ಯಾಪಾರಿಗಳು ಮತ್ತು ರಸ್ತೆ ಬದಿ ವ್ಯಾಪಾರಿಗಳು ಈಗಾಗಲೇ ಕೋವಿಡ್-19 ಸಾಂಕ್ರಾಮಿಕ, ಲಾಕ್ ಡೌನ್ ನಿಂದ ಸಾಕಷ್ಟು ತೊಂದರೆ ಅನುಭವಿಸಿದ್ದು ಶನಿವಾರ ನಡೆಯುವ ಕರ್ನಾಟಕ ಬಂದ್ ನಿಂದ ಉಂಟಾಗುವ ನಷ್ಟವನ್ನು ಆಯೋಜಕರೇ ಭರಿಸುವ ಬಗ್ಗೆ ಪರಿಗಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಕರ್ನಾಟಕ ಬಂದ್ ನಿಂದ ಹಲವರ ಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ, ಸಣ್ಣ ವ್ಯಾಪಾರಿಗಳಿಗೆ ಆಗಲಿರುವ ನಷ್ಟವನ್ನು ಭರಿಸುವ ಸೂಚನೆ ನೀಡಿದ್ದಾರೆ.

ಲೆಟ್ಜಿಕಿಟ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಬಂದ್ ವೇಳೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಬಳಕೆಯ ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಬಂದ್ ವೇಳೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ದಂಡ ಹೇರಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸಹ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT