ಸಾಂದರ್ಭಿಕ ಚಿತ್ರ 
ರಾಜ್ಯ

ಕಿಕ್ ಪ್ರಿಯರಿಗೆ ಸಿಹಿಸುದ್ದಿ: ಹೊಸದಾಗಿ, ಸ್ವಚ್ಛವಾಗಿ ಕಂಗೊಳಿಸಲಿವೆ ಬಾರ್, ಲಿಕ್ಕರ್ ಶಾಪ್ ಗಳು!

ಕಿಕ್ ಪ್ರಿಯರಿಗೊಂದು ಸಿಹಿಸುದ್ದಿ. ರಾಜ್ಯದಲ್ಲಿರುವ ಲಿಕ್ಕರ್ ಶಾಪ್ ಗಳು, ಬಾರ್ ಗಳು ಇನ್ನು ಮುಂದೆ ಹೊಸ ನೋಟದಲ್ಲಿ ಕಂಗೊಳಿಸಲಿವೆ.

ಬೆಂಗಳೂರು: ಕಿಕ್ ಪ್ರಿಯರಿಗೊಂದು ಸಿಹಿಸುದ್ದಿ. ರಾಜ್ಯದಲ್ಲಿರುವ ಲಿಕ್ಕರ್ ಶಾಪ್ ಗಳು, ಬಾರ್ ಗಳು ಇನ್ನು ಮುಂದೆ ಹೊಸ ನೋಟದಲ್ಲಿ ಕಂಗೊಳಿಸಲಿವೆ.

ಲಿಕ್ಕರ್ ಶಾಪ್ ನ ನಾಮಫಲಕದಿಂದ ಹಿಡಿದು ಗೋಡೆ ಪೈಂಟಿಂಗ್, ಅಡುಗೆ ಮನೆ, ಹೊರಾಂಗಣ ಎಲ್ಲವೂ ಇನ್ನು ಮುಂದೆ ಹೊಸತನದಿಂದ ಕಂಗೊಳಿಸಲಿವೆ. ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ರಾಜ್ಯಸರ್ಕಾರ ಸದ್ಯದಲ್ಲಿಯೇ ಮಾರ್ಗಸೂಚಿ ಹೊರಡಿಸಲಿದೆ. 
ಅಬಕಾರಿ ಇಲಾಖೆ ತಪಾಸಣೆ ನಡೆಸಲಿದ್ದು ಆವರಣಗಳು ಸ್ವಚ್ಛವಾಗಿಲ್ಲದಿದ್ದರೆ, ಮದ್ಯಪಾನಿಗಳು ಕುಡಿಯುವ ಗ್ಲಾಸ್ ಗಳು ಸ್ವಚ್ಛವಾಗಿಲ್ಲದಿದ್ದರೆ ಪರವಾನಗಿ ರದ್ದುಪಡಿಸಲಾಗುತ್ತದೆ ಎಂದು ಅಬಕಾರಿ ಸಚಿವ ಹೆಚ್ ನಾಗೇಶ್ ತಿಳಿಸಿದ್ದಾರೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಹಲವು ಲಿಕ್ಕರ್ ಸ್ಟೋರ್ ಗಳು ಮತ್ತು ಬಾರ್ ಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದಿಲ್ಲ. ಅದರ ಬಗ್ಗೆ ಗಮನವನ್ನು ಕೂಡ ನೀಡುವುದಿಲ್ಲ. ಬಾರ್ ಅಂಡ್ ರೆಸ್ಟೋರೆಂಟ್ ಗಳು, ಲಿಕ್ಕರ್ ಶಾಪ್ ಗಳು ನೋಡಲು ಆಕರ್ಷಕವಾಗಿರಬೇಕು. ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಇಲ್ಲದಿದ್ದರೂ ಕೂಡ ಸ್ವಚ್ಛತೆಯಂತೂ ಇರಬೇಕು. ಈ ನಿಟ್ಟಿನಲ್ಲಿ ನಾಮಫಲಕ, ಸೂಚನಾ ಫಲಕಗಳನ್ನು ಬದಲಾಯಿಸುವಂತೆ, ಪೀಠೋಪಕರಣಗಳನ್ನು ಸ್ವಚ್ಛಗೊಳಿಸುವಂತೆ ಮತ್ತು ಆವರಣಗಳನ್ನು, ಗೋಡೆಗಳನ್ನು ಸ್ವಚ್ಛಗೊಳಿಸುವಂತೆ ಮಾರ್ಗಸೂಚಿ ಹೊರಡಿಸಲಾಗುವುದು ಎಂದರು.

ಸರ್ಕಾರ ಮಾರ್ಗಸೂಚಿ ಹೊರಡಿಸಿದ ನಂತರ ಅಧಿಕಾರಿಗಳು ಕಾಲಕಾಲಕ್ಕೆ ಹೋಗಿ ತಪಾಸಣೆ ಮಾಡಲಿದ್ದಾರೆ. ಸರ್ಕಾರದ ನಿಯಮಗಳನ್ನು ಪಾಲಿಸದ ಬಾರ್ ಗಳು, ಲಿಕ್ಕರ್ ಶಾಪ್ ಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT