ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ಲಸಿಕೆ ಪೂರೈಕೆಗೆ ರಾಜ್ಯದಲ್ಲಿ 4.7 ಲಕ್ಷ ಆರೋಗ್ಯ ಕಾರ್ಯಕರ್ತರು ದಾಖಲು 

ಕರ್ನಾಟಕದಲ್ಲಿ ಕೋವಿಡ್-19 ಲಸಿಕೆ ವಿತರಣೆಗೆ 4.7 ಲಕ್ಷಕ್ಕೂ ಅಧಿಕ ಆರೋಗ್ಯ ಸೇವೆ ಕಾರ್ಯಕರ್ತರು ದಾಖಲು ಮಾಡಿಕೊಂಡಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್-19 ಲಸಿಕೆ ವಿತರಣೆಗೆ 4.7 ಲಕ್ಷಕ್ಕೂ ಅಧಿಕ ಆರೋಗ್ಯ ಸೇವೆ ಕಾರ್ಯಕರ್ತರು ದಾಖಲು ಮಾಡಿಕೊಂಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಲಸಿಕೆ ವಿಭಾಗದ ಉಪ ನಿರ್ದೇಶಕ ಡಾ ರಜನಿ ನಾಗೇಶ್ ರಾವ್, 2 ಲಕ್ಷದ 31 ಸಾವಿರದ 862 ಸರ್ಕಾರಿ ಮತ್ತು 2 ಲಕ್ಷದ 46 ಸಾವಿರದ 133 ಖಾಸಗಿ ವಲಯದ ಆರೋಗ್ಯ ಕಾರ್ಯಕರ್ತರು ದಾಖಲಾತಿ ಮಾಡಿಕೊಂಡಿದ್ದಾರೆ ಎಂದರು.

ಇನ್ನೂ ಹಲವರು ದಾಖಲಾತಿ ಮಾಡಿಕೊಳ್ಳಬೇಕಷ್ಟೆ.  ಸದ್ಯದಲ್ಲಿಯೇ ಅಂತಿಮ ಪಟ್ಟಿ ಅಪ್ ಡೇಟ್ ಮಾಡಬೇಕಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಮೂಲಕ ಲಸಿಕೆಗಳನ್ನು ವಿತರಿಸಲಾಗುವುದು ಎಂದು ಡಾ ರಜನಿ ತಿಳಿಸಿದರು.

ಎಲ್ಲಿಂದ ಹೇಗೆ ಎಲ್ಲಿಗೆ ಲಸಿಕೆಗಳನ್ನು ಹೊತ್ತೊಯ್ಯಬೇಕು ಎಂಬುದಕ್ಕೆ ನಮಗೆ ಸ್ಪಷ್ಟ ಸೂಚನೆ ಸಿಗಬೇಕಿದೆ. ಆದರೂ ಸಾಮಾನ್ಯವಾಗಿ ನಿಗದಿತ ಲಸಿಕೆಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿಗಳ ಮೂಲಕ ನೀಡಲಾಗುವುದು ಎಂದು ವೈದ್ಯರು ತಿಳಿಸಿದರು.

ಆರೋಗ್ಯ ವಲಯ ಕಾರ್ಯಕರ್ತರಿಗೆ ಇದಕ್ಕೆ ವೇತನ ನೀಡಲಾಗುತ್ತದೆಯೇ ಎಂದು ಕೇಳಿದ್ದಕ್ಕೆ ವರ್ಚುವಲ್ ಆಗಿ ತರಬೇತಿ ಇನ್ನೂ ಆರಂಭವಾಗಬೇಕಿದೆ ಎಂದರು.

ಈ ಮಧ್ಯೆ ಸುತ್ತೋಲೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ವಿ ಸುಶೀಲಾ, ಕೋವಿಡ್-19 ವಾರ್ ರೂಂನ್ನು ಲಸಿಕೆ ನಿಯಂತ್ರಣ ಕೇಂದ್ರವನ್ನಾಗಿ ಬಳಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT