ಹೃದಯ ಸಮಸ್ಯೆ 
ರಾಜ್ಯ

ಹಸೆಮಣೆ ಏರಬೇಕಿದ್ದ ಮದುಮಗ ಹೃದಯಾಘಾತದಿಂದ ಸಾವು

ಇಂದು ಹಸೆಮಣೆ ಏರಬೇಕಿದ್ದ ಮದುಮಗ ಹೃದಯಘಾತದಿಂದ ಮೃತಪಟ್ಟಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ರಾಯಚೂರು: ಇಂದು ಹಸೆಮಣೆ ಏರಬೇಕಿದ್ದ ಮದುಮಗ ಹೃದಯಘಾತದಿಂದ ಮೃತಪಟ್ಟಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ. ಹುಲುಗಪ್ಪ ಬುದ್ದಿನ್ನಿ(36) ಮೃತ ದುರ್ದೈವಿ. ಮೃತರು ಪಂಚಾಯತ್ ರಾಜ್ ಇಲಾಖೆಯಲ್ಲಿ ಎಸ್‌ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತ ಹುಲುಗಪ್ಪ ರಾಮತ್ನಾಳ ಗ್ರಾಮ ಪಂಚಾಯತಿಯಲ್ಲಿ  ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್(ಎಸ್‍ಡಿಎ) ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 

ಇಂದು ಸಿಂಧನೂರು ತಾಲುಕಿನ ಗೋರೆಬಾಳ ಗ್ರಾಮದ ಶರಣ ಬಸವೇಶ್ವರ ದೇಗುಲದಲ್ಲಿ ಹುಲಗಪ್ಪ ಅವರ ಮದುವೆ ನಿಗದಿ ಆಗಿತ್ತು. ಇಂದು ಮದುವೆ ಆಗಬೇಕಾಗಿದ್ದ ವರ ನಿನ್ನೆ ಸಂಜೆ ಸಾವನ್ನಪ್ಪಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಹುಲುಗಪ್ಪ ಏಕಾಏಕಿ ಹೃದಯಾಘಾತದಿಂದ  ಸಾವನ್ನಪ್ಪಿದ್ದಾರೆ. ವರನ ಸಾವಿನಿಂದ ಜವಳಗೇರಾ ಗ್ರಾಮದಲ್ಲಿ ಮದುವೆ ಸಂಭ್ರಮದಲ್ಲಿರ ಬೇಕಾದ ಊರಲ್ಲಿ ಸೂತಕದ ವಾತಾರಣವಿದೆ. ಹುಲುಗಪ್ಪನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ  ನಡೆದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT