ಹೃದಯ ಸಮಸ್ಯೆ 
ರಾಜ್ಯ

ಹಸೆಮಣೆ ಏರಬೇಕಿದ್ದ ಮದುಮಗ ಹೃದಯಾಘಾತದಿಂದ ಸಾವು

ಇಂದು ಹಸೆಮಣೆ ಏರಬೇಕಿದ್ದ ಮದುಮಗ ಹೃದಯಘಾತದಿಂದ ಮೃತಪಟ್ಟಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ರಾಯಚೂರು: ಇಂದು ಹಸೆಮಣೆ ಏರಬೇಕಿದ್ದ ಮದುಮಗ ಹೃದಯಘಾತದಿಂದ ಮೃತಪಟ್ಟಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ. ಹುಲುಗಪ್ಪ ಬುದ್ದಿನ್ನಿ(36) ಮೃತ ದುರ್ದೈವಿ. ಮೃತರು ಪಂಚಾಯತ್ ರಾಜ್ ಇಲಾಖೆಯಲ್ಲಿ ಎಸ್‌ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತ ಹುಲುಗಪ್ಪ ರಾಮತ್ನಾಳ ಗ್ರಾಮ ಪಂಚಾಯತಿಯಲ್ಲಿ  ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್(ಎಸ್‍ಡಿಎ) ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 

ಇಂದು ಸಿಂಧನೂರು ತಾಲುಕಿನ ಗೋರೆಬಾಳ ಗ್ರಾಮದ ಶರಣ ಬಸವೇಶ್ವರ ದೇಗುಲದಲ್ಲಿ ಹುಲಗಪ್ಪ ಅವರ ಮದುವೆ ನಿಗದಿ ಆಗಿತ್ತು. ಇಂದು ಮದುವೆ ಆಗಬೇಕಾಗಿದ್ದ ವರ ನಿನ್ನೆ ಸಂಜೆ ಸಾವನ್ನಪ್ಪಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಹುಲುಗಪ್ಪ ಏಕಾಏಕಿ ಹೃದಯಾಘಾತದಿಂದ  ಸಾವನ್ನಪ್ಪಿದ್ದಾರೆ. ವರನ ಸಾವಿನಿಂದ ಜವಳಗೇರಾ ಗ್ರಾಮದಲ್ಲಿ ಮದುವೆ ಸಂಭ್ರಮದಲ್ಲಿರ ಬೇಕಾದ ಊರಲ್ಲಿ ಸೂತಕದ ವಾತಾರಣವಿದೆ. ಹುಲುಗಪ್ಪನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ  ನಡೆದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT