ಸಾಂದರ್ಭಿಕ ಚಿತ್ರ 
ರಾಜ್ಯ

ಪೊಲೀಸರ ಮೇಲೆ ಹಲ್ಲೆ ಆರೋಪ: ಎಂಎಲ್ ಸಿ ನಾಸೀರ್ ಅಹ್ಮದ್ ಪುತ್ರನ ಬಂಧನ

ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ನಾಸೀರ್ ಅಹ್ಮದ್ ಅವರ ಪುತ್ರ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ನಾಸೀರ್ ಅಹ್ಮದ್ ಅವರ ಪುತ್ರ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಕಾಂಗ್ರೆಸ್ ಎಂಎಲ್​​ಸಿ ನಾಸೀರ್ ಅಹ್ಮದ್ ಪುತ್ರ ಪಯಾಜ್ ಹಾಗೂ ಆತನ ಸ್ನೇಹಿತರು ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರು. ಈ ಹಿನ್ನೆಲೆ ಹೆಬ್ಬಾಳದ ಬಿಎಂಟಿಸಿ ಡಿಪೋ ಬಳಿ ಬರುತ್ತಿದ್ದ ವೇಳೆ ಕಾರು ತಡೆದು ಪೊಲೀಸರು ಪ್ರಶ್ನೆ ಮಾಡಿದ್ದಾರೆ.

ಇಬ್ಬರು ಪೊಲೀಸರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಮದ್ಯಪಾನ ಮಾಡಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ನಾಸಿರ್ ಅಹಮದ್ ಅವರ ಪುತ್ರ ಫಯಾಜ್ ಅಹಮದ್ ಸೇರಿದಂತೆ ಮೂವರು ಪೊಲೀಸರ ಮೇಲೆ ಏಕಾಏಕಿ ಹಲ್ಲೆ ‌ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಕ್ಷಣ ಸ್ಥಳಕ್ಕೆ ಹೊಯ್ಸಳ ಕರೆಸಿ ಹಲ್ಲೆ ನಡೆಸಿದ ಮೂವರನ್ನೂ ವಶಕ್ಕೆ ಪಡೆದಿರುವ ಅಮೃತಹಳ್ಳಿ‌ ಪೊಲೀಸರು ಸದ್ಯ ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ, ಆದ್ರೂ ಯಾವುದೇ ಲಾಭ ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ

DKS ನಟ್ಟು ಬೋಲ್ಟು ಹೇಳಿಕೆ ಕಿತಾಪತಿಗೆ ಸಾಧು ಕೋಕಿಲ ಕಾರಣ: ದರ್ಶನ್ ಸ್ನೇಹದ ಬಗ್ಗೆ ನಟ ಸುದೀಪ್ ಹೇಳಿದ್ದೇನು?

Indian Stock Market: GDP ವರದಿ ಎಫೆಕ್ಟ್; ಹೂಡಿಕೆದಾರರಿಗೆ 5 ಲಕ್ಷ ಕೋಟಿ ರೂ ಲಾಭ!

'Vote chori' ಮಾಹಿತಿಯ ಹೈಡ್ರೋಜನ್ ಬಾಂಬ್ ಬರ್ತಾ ಇದೆ.. PM Modi ಮುಖ ಕೂಡ ತೋರಿಸಲಾಗಲ್ಲ: Rahul Gandhi

'ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸುವ ಎಲ್ಲ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ': ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆ

SCROLL FOR NEXT