ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಮೊಗ್ಗದಲ್ಲಿ ನಾಲ್ಕು ಕೊರೋನಾ ಲಸಿಕಾ ಸಂಗ್ರಹ ಕೇಂದ್ರ ಸ್ಥಾಪನೆ

ಕೊರೋನಾ ಲಸಿಕೆ ತಯಾರಾದ ನಂತರ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಶಿವಮೊಗ್ಗ: ಕೊರೋನಾ ಲಸಿಕೆ ತಯಾರಾದ ನಂತರ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಹೀಗಾಗಿ ಲಸಿಕೆ ಸಂಗ್ರಹಕ್ಕಾಗಿ ಬೃಹತ್ ಜಾಗಗಳ ಅವಶ್ಯಕತೆಯಿದ್ದು, ಸ್ಥಳ ಗುರುತಿಸಲಾಗಿದೆ. ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಗಳಿಗೂ ಮುಂಚೂಣಿಯಲ್ಲಿರುವ ಖಾಸಗಿ ಮತ್ತು ಸರ್ಕಾರಿ ಆರೋಗ್ಯ ಕಾರ್ಯಕರ್ತರ ಪಟ್ಟಿ ಸಿದ್ದ ಮಾಡಲು ಆದೇಶ ಹೊರಡಿಸಿದೆ.

ಆರೋಗ್ಯ ಕಾರ್ಯಕರ್ತರ ಮಾಹಿತಿ ಸಂಗ್ರಹ ಕೆಲಸ ಆರಂಭವಾಗಿದ್ದು, 20,549 ಆರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.

ಜನವರಿ ಅಂತ್ಯದೊಳಗೆ ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ, ಕಾರ್ಯಕರ್ತರ ಎಲ್ಲಾ ಮಾಹಿತಿಗಳನ್ನು ಸಿದ್ದಪಡಿಸುವಂತೆ ಸರ್ಕಾರ ಸೂಚಿಸಿದೆ ಎಂದು ಅವರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT