ಸೀಗೇಕುಪ್ಪೆ ಗ್ರಾಮ ಪಂಚಾಯಿತಿ 
ರಾಜ್ಯ

ರಾಮನಗರ: ಗ್ರಾಮ ವಿಕಾಸ ಯೋಜನೆಯಲ್ಲಿ ಗೋಲ್ ಮಾಲ್, ಲಕ್ಷಾಂತರ ಹಣ ಗುಳುಂ

ಮಾಗಡಿ ವಿಧಾನಸಭಾ ಕ್ಷೇತ್ರದ ಸೀಗೇಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನದಲ್ಲಿ ಗೋಲ್ ಮಾಲ್ ನಡೆದಿದ್ದು, ಲಕ್ಷಾಂತರ ಹಣ ಗುಳುಂ ಮಾಡಲಾಗಿದೆ.

ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದ ಸೀಗೇಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನದಲ್ಲಿ ಗೋಲ್ ಮಾಲ್ ನಡೆದಿದ್ದು, ಲಕ್ಷಾಂತರ ಹಣ ಗುಳುಂ ಮಾಡಲಾಗಿದೆ.

ಯೋಜನೆ ಅನುಷ್ಠಾನಗೊಳಿಸುತ್ತಿರುವ ಸರ್ಕಾರಿ ಗುತ್ತಿಗೆ ಸಂಸ್ಥೆ ಕರ್ನಾಟಕ ರೂರಲ್ ಇನ್ ಫ್ರಾಸ್ಟ್ರಕ್ಚರ್ ಡೆವಲಪ್ ಮೆಂಟ್ ಲಿಮೆಟೆಡ್ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ರಾಮನಗರ ಉಪ ನಗರ ಉಪ ವಿಭಾಗ ನೀಡಿರುವ ಮಾಹಿತಿಯಲ್ಲಿ ಈ ಅವ್ಯವಹಾರ ಅಕ್ರಮ ಬೆಳಕಿಗೆ ಬಂದಿದೆ.

ಸೀಗೇ ಕುಪ್ಪೆ ಗ್ರಾಮದಲ್ಲಿ ಕೆಲವು ಪ್ರದೇಶಗಳಲ್ಲಿ  ಕಾಮಗಾರಿ ಆಗದಿದ್ದರೂ  ಚರಂಡಿ , ಸಿಮೆಂಟ್ ಕಾಂಕ್ರಿಟ್ , ಡಕ್ ಸ್ಲಾಬ್ ನಿರ್ಮಾಣ ಮಾಡಲಾಗಿದೆ ಎಂದು ನಕಲಿ ಬಿಲ್ ಸೃಷ್ಟಿಸಿ ಹಣ ಲಪಟಾಯಿಸಲಾಗಿದೆ. ಸೀಗೇಕುಪ್ಪೆ ಜನತಾ ಕಾಲೋನಿಯಲ್ಲಿ ನರೇಗಾ ಯೋಜನೆಯಲ್ಲಿ ಕೆಲಸ ಮಾಡಿಸಿ ಹಣ ಪಡೆದು, ಮತ್ತೆ  ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಲ್ಲೂ ಹಣ ದೋಚಿರುವ ಆರೋಪ ಕೇಳಿಬಂದಿದೆ.

ಅರಳೇಮರದೊಡ್ಡಿ ಗ್ರಾಮದಲ್ಲಿ  ಕಾಮಗಾರಿ ಪೂರ್ಣಗೊಂಡಿದ್ದರೂ, ಸದರಿ ಕಾಮಗಾರಿ ಅನುಮೋದನೆಗೊಂಡ ಅಂದಾಜು ಪಟ್ಟಿಯಲ್ಲಿ ಸೇರಿಲ್ಲ ಎಂಬ ಮಾಹಿತಿ ನೀಡಿದ್ದಾರೆ. 14ನೇ ಹಣಕಾಸು ಆಯೋಗದ ವರದಿ ಅನುಸಾರ ಗ್ರಾಮ ಪಂಚಾಯಿತಿಗೆ ಬಿಡುಗಡೆಯಾಗಿರುವ  ಅನುದಾನ ದುರ್ಬಳಕೆ ಆರೋಪವೂ ಇದೆ. ಇದರಡಿ ಕೈಗೊಳ್ಳಲಾದ ಕಾಮಗಾರಿಗಳ ಕ್ರಿಯಾ ಯೋಜನೆ ನೀಡಲು ಅಧಿಕಾರಿಗಳು ಸತಾಯಿಸುತ್ತಾರೆ. ವಿನಾಕಾರಣ ಕಾಲಹಣ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel