ಸಂಗ್ರಹ ಚಿತ್ರ 
ರಾಜ್ಯ

'ಕಾವೇರಿ ಕಾಲಿಂಗ್' ಸರ್ಕಾರದ ಯೋಜನೆಯೇ? ನಿಮ್ಮ ನಿಲುವು ಸ್ಪಷ್ಟಪಡಿಸಿ: ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ

'ಕಾವೇರಿ ಕಾಲಿಂಗ್' ಅಭಿಯಾನದ ಹೆಸರಿನಲ್ಲಿ ಈಶ ಫೌಂಡೇಷನ್ ಹಮ್ಮಿಕೊಂಡಿರುವ ಯೋಜನೆ ರಾಜ್ಯ ಸರ್ಕಾರದ ಯೋಜನೆಯೋ ಅಥವಾ ಇಲ್ಲವೋ ಎಂಬುದನ್ನು ಇನ್ನೆರಡು ದಿನಗಳಲ್ಲಿ ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚಿಸಿದೆ. 

ಬೆಂಗಳೂರು: 'ಕಾವೇರಿ ಕಾಲಿಂಗ್' ಅಭಿಯಾನದ ಹೆಸರಿನಲ್ಲಿ ಈಶ ಫೌಂಡೇಷನ್ ಹಮ್ಮಿಕೊಂಡಿರುವ ಯೋಜನೆ ರಾಜ್ಯ ಸರ್ಕಾರದ ಯೋಜನೆಯೋ ಅಥವಾ ಇಲ್ಲವೋ ಎಂಬುದನ್ನು ಇನ್ನೆರಡು ದಿನಗಳಲ್ಲಿ ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚಿಸಿದೆ. 

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸ್ವಯಂಪ್ರೇರಿತ ಅರ್ಜಿಯಾಗಿ ಪರಿವರ್ತಿಸಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಎಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಖಾಸಗಿ ಸಂಸ್ಥೆಯು ಇದೊಂದು ಸರ್ಕಾರಿ ಯೋಜನೆಯೆಂದು ಬಿಂಬಿಸುತ್ತಿದೆ. ಹೀಗಾಗಿ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ತಿಳಿಸಿದೆ. 

ಸರ್ಕಾರ ಪರ ವಕೀಲರು ಇದು ಸರ್ಕಾರದ ಯೋಜನೆಯಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೂ ಯೋಜನೆಯ ಪ್ರಾಯೋಜಕರು 2011ರಲ್ಲಿ ರಾಜ್ಯ ಸರ್ಕಾರ ಪ್ರಾರಂಭಿಸಿದ್ದ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಗೆ ರೈತರನ್ನು ಸೇರ್ಪಡೆಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಅಭಿಯಾನದ ಭಾಗವಾಗಿ ಸಾರ್ವಜನಿಕರಿಂದ ಪ್ರತಿ ಸಸಿಗೆ ರೂ.42 ಸಂಗ್ರಹಿಸಲಾಗುತ್ತಿದ್ದು, ಇದನ್ನು ಪ್ರಶ್ನಿಸಿ ಹಾಗೂ ತಡೆ ನೀಡುವಂತೆ ಕೋರಿ ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. 

ಕಾವೇರಿ ಜಲಾನಯನ ಪ್ರದೇಶವನ್ನು ಉಳಿಸಲು 253 ಕೋಟಿ ಸಸಿಗಳನ್ನು ನೆಡಲು ಈಶಾ ಫೌಂಡೇಶನ್ ಯೋಜಿಸಿದ್ದು, ಇದಕ್ಕಾಗಿ ಒಂದು ಸಸಿಗೆ 42 ರೂ ಸಂಗ್ರಹಿಸಿದೆ. ಇದರ ಮೊತ್ತ ರೂ.10,626 ಕೋಟಿಯಾಗಲಿದ್ದು, ಇಷ್ಟೊಂದು ದೊಡ್ಡ ಮೊತ್ತ ಸಂಗ್ರಹವಾಗುತ್ತಿದ್ದರು ಸರ್ಕಾರ ಶಾಂತವಾಗಿರಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!