ಸಂಗ್ರಹ ಚಿತ್ರ 
ರಾಜ್ಯ

'ಕಾವೇರಿ ಕಾಲಿಂಗ್' ಸರ್ಕಾರದ ಯೋಜನೆಯೇ? ನಿಮ್ಮ ನಿಲುವು ಸ್ಪಷ್ಟಪಡಿಸಿ: ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ

'ಕಾವೇರಿ ಕಾಲಿಂಗ್' ಅಭಿಯಾನದ ಹೆಸರಿನಲ್ಲಿ ಈಶ ಫೌಂಡೇಷನ್ ಹಮ್ಮಿಕೊಂಡಿರುವ ಯೋಜನೆ ರಾಜ್ಯ ಸರ್ಕಾರದ ಯೋಜನೆಯೋ ಅಥವಾ ಇಲ್ಲವೋ ಎಂಬುದನ್ನು ಇನ್ನೆರಡು ದಿನಗಳಲ್ಲಿ ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚಿಸಿದೆ. 

ಬೆಂಗಳೂರು: 'ಕಾವೇರಿ ಕಾಲಿಂಗ್' ಅಭಿಯಾನದ ಹೆಸರಿನಲ್ಲಿ ಈಶ ಫೌಂಡೇಷನ್ ಹಮ್ಮಿಕೊಂಡಿರುವ ಯೋಜನೆ ರಾಜ್ಯ ಸರ್ಕಾರದ ಯೋಜನೆಯೋ ಅಥವಾ ಇಲ್ಲವೋ ಎಂಬುದನ್ನು ಇನ್ನೆರಡು ದಿನಗಳಲ್ಲಿ ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚಿಸಿದೆ. 

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸ್ವಯಂಪ್ರೇರಿತ ಅರ್ಜಿಯಾಗಿ ಪರಿವರ್ತಿಸಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಎಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಖಾಸಗಿ ಸಂಸ್ಥೆಯು ಇದೊಂದು ಸರ್ಕಾರಿ ಯೋಜನೆಯೆಂದು ಬಿಂಬಿಸುತ್ತಿದೆ. ಹೀಗಾಗಿ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ತಿಳಿಸಿದೆ. 

ಸರ್ಕಾರ ಪರ ವಕೀಲರು ಇದು ಸರ್ಕಾರದ ಯೋಜನೆಯಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೂ ಯೋಜನೆಯ ಪ್ರಾಯೋಜಕರು 2011ರಲ್ಲಿ ರಾಜ್ಯ ಸರ್ಕಾರ ಪ್ರಾರಂಭಿಸಿದ್ದ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಗೆ ರೈತರನ್ನು ಸೇರ್ಪಡೆಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಅಭಿಯಾನದ ಭಾಗವಾಗಿ ಸಾರ್ವಜನಿಕರಿಂದ ಪ್ರತಿ ಸಸಿಗೆ ರೂ.42 ಸಂಗ್ರಹಿಸಲಾಗುತ್ತಿದ್ದು, ಇದನ್ನು ಪ್ರಶ್ನಿಸಿ ಹಾಗೂ ತಡೆ ನೀಡುವಂತೆ ಕೋರಿ ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. 

ಕಾವೇರಿ ಜಲಾನಯನ ಪ್ರದೇಶವನ್ನು ಉಳಿಸಲು 253 ಕೋಟಿ ಸಸಿಗಳನ್ನು ನೆಡಲು ಈಶಾ ಫೌಂಡೇಶನ್ ಯೋಜಿಸಿದ್ದು, ಇದಕ್ಕಾಗಿ ಒಂದು ಸಸಿಗೆ 42 ರೂ ಸಂಗ್ರಹಿಸಿದೆ. ಇದರ ಮೊತ್ತ ರೂ.10,626 ಕೋಟಿಯಾಗಲಿದ್ದು, ಇಷ್ಟೊಂದು ದೊಡ್ಡ ಮೊತ್ತ ಸಂಗ್ರಹವಾಗುತ್ತಿದ್ದರು ಸರ್ಕಾರ ಶಾಂತವಾಗಿರಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ