ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ 
ರಾಜ್ಯ

ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳಿಗೆ ಈಗ ಪ್ರತಿಪಕ್ಷಗಳ ವಿರೋಧ: ಸಚಿವ ಡಾ. ಕೆ.ಸುಧಾಕರ್

ಈ ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳನ್ನು ಈಗ ಪ್ರತಿಪಕ್ಷಗಳು ವಿನಾಕಾರಣ ವಿರೋಧಿಸುತ್ತಿದ್ದು, ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಈ ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳನ್ನು ಈಗ ಪ್ರತಿಪಕ್ಷಗಳು ವಿನಾಕಾರಣ ವಿರೋಧಿಸುತ್ತಿದ್ದು, ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದೆ. ಪ್ರತಿಪಕ್ಷಗಳು ಈ ಹಿಂದೆ ತಾವೇ ಕೃಷಿ ಸುಧಾರಣೆಗಳನ್ನು ಬೆಂಬಲಿಸಿದ್ದವು. ಪ್ರತಿಪಕ್ಷಗಳ ಈಗಿನ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಜನರ ವಿಶ್ವಾಸ ಕಳೆದುಕೊಂಡು ಚುನಾವಣೆಗಳಲ್ಲಿ ಸತತ ಸೋಲುಗಳಿಂದ ಹತಾಶಗೊಂಡಿರುವ ವಿಪಕ್ಷಗಳು ರೈತರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿವೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ವಿಸ್ತøತ ಮಾರುಕಟ್ಟೆ ಕಲ್ಪಿಸಿ, ಅನ್ನದಾತರ ಆದಾಯ ಹೆಚ್ಚಿಸುವ ಸದುದ್ದೇಶ ಹೊಂದಿದ್ದು, ಈಗಿರುವ ಎಪಿಎಂಸಿ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಸಹ ಮುಂದುವರಿಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಯುಪಿಎ ಅಧಿಕಾರದಲ್ಲಿದ್ದಾಗ ಇದೇ ರೀತಿಯ ಕೃಷಿ ಸುಧಾರಣೆಗಳನ್ನು ತರಲು ಮುಂದಾಗಿತ್ತು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೂ ಇದೇ ಭರವಸೆ ನೀಡಲಾಗಿತ್ತು. ಅಂದಿನ ಕೇಂದ್ರ ಕೃಷಿ ಸಚಿವರಾಗಿದ್ದ ಶರದ್ ಪವಾರ್ ಈ ಸುಧಾರಣೆಗಳನ್ನು ತರಲು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಡಿಎಂಕೆ ಪ್ರಣಾಳಿಕೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮ್ರಿಂದರ್ ಸಿಂಗ್ ಅವರ ಹೇಳಿಕೆಗಳೂ ಈ ಹಿಂದೆ ಈ ಸುಧಾರಣೆಗಳನ್ನು ಬೆಂಬಲಿಸಿದ್ದವು. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಈಗಾಗಲೇ ಕೇಂದ್ರದ ಮಸೂದೆಗಳು ಜಾರಿ ಬರುವಂತೆ ಅಧಿಸೂಚನೆ ಹೊರಡಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT