ಬಿಬಿಎಂಪಿ ಮಾರ್ಷಲ್'ಗಳು 
ರಾಜ್ಯ

ಮಾಸ್ಕ್ ಧರಿಸದ ಸಾರ್ವಜನಿಕರಿಗೆ ದಂಡ ಹಾಕಿ, ನಮಗಲ್ಲ: ಹೊಟೆಲ್ ಮಾಲೀಕರ ಒಕ್ಕೂಟ

ಮಾಸ್ಕ್ ಧರಿಸದ ಸಾರ್ವಜನಿಕರಿಗೆ ದಂಡ ಹಾಕಬೇಕೇ ಹೊರತು ಹೊಟೆಲ್ ಮಾಲೀಕರಿಗೆ ಅಲ್ಲ ಎಂದು ಹೊಟೆಲ್ ಮಾಲೀಕರ ಒಕ್ಕೂಟ ಬಿಬಿಎಂಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು: ಮಾಸ್ಕ್ ಧರಿಸದ ಸಾರ್ವಜನಿಕರಿಗೆ ದಂಡ ಹಾಕಬೇಕೇ ಹೊರತು ಹೊಟೆಲ್ ಮಾಲೀಕರಿಗೆ ಅಲ್ಲ ಎಂದು ಹೊಟೆಲ್ ಮಾಲೀಕರ ಒಕ್ಕೂಟ ಬಿಬಿಎಂಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲಿಸದೇ, ವಾಣಿಜ್ಯ ಕಟ್ಟಡಗಳ ಮಾಲೀಕರಿಗೆ ದಂಡ ವಿಧಿಸುವ ಇತ್ತೀಚಿನ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಶನ್ ಸದಸ್ಯರು ಮಂಗಳವಾರ ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ ಪ್ರಸಾದ್ ಅವರನ್ನು  ಒತ್ತಾಯಿಸಿದ್ದಾರೆ. ಮಂಗಳವಾರ ಬಿಬಿಎಂಪಿ ಅಯುಕ್ತ ಮಂಜುನಾಥ್ ಪ್ರಸಾದ್ ಅವರನ್ನು ಭೇಟಿಯಾದ ಸಂಘದ ಸದಸ್ಯರು, ದಂಡ ವಿಧಿಸುವುದು ಸರ್ಕಾರದ ಕೆಲಸ. ಅದರಲ್ಲಿ ನಮಗೆ ತಕರಾರಿಲ್ಲ, ಆದರೆ ನಿಯಮ ಮುರಿಯುವ ನಾಗರಿಕರಿಗೆ ದಂಡ ಹೇರಬೇಕೇ ಹೊರತು ಹೊಟೆಲ್ ಮಾಲೀಕರಿಗೆ ದಂಡ ಹಾಕುವುದು  ಸರಿಯಲ್ಲ ಎಂದು ಹೇಳಿದ್ದಾರೆ.

ಅಂತೆಯೇ ಮಾಸ್ಕ್ ಗಳನ್ನು ಧರಿಸದ ಮತ್ತು ದೈಹಿಕ ದೂರವನ್ನು ಕಾಯ್ದುಕೊಳ್ಳದ ಕಾರಣಕ್ಕಾಗಿ ಸರ್ಕಾರವು ಒಂದು ಆದ್ಯತೆಯನ್ನು ನೀಡಿ ರಾಜಕಾರಣಿಗಳು, ರಾಜಕೀಯ ಪಕ್ಷದ ಕಾರ್ಯಕರ್ತರು ಮತ್ತು ಚಳವಳಿಗಾರರಿಗೆ ದಂಡ ವಿಧಿಸಬೇಕು ಎಂದು ಅವರು ಒತ್ತಾಯಿಸಿದರು. ನಿಯಮಗಳನ್ನು ಪಾಲಿಸದ ಎಲ್ಲರ ವಿರುದ್ಧ  ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯದ ಆದೇಶಗಳನ್ನು ಅವರು ಸರ್ಕಾರಕ್ಕೆ ನೆನಪಿಸಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಪಿ ಸಿ ರಾವ್ ಅವರು, 'ಜನರು ರೆಸ್ಟೋರೆಂಟ್, ಹೋಟೆಲ್‌ಗಳಲ್ಲಿ ಊಟ ಮಾಡುವಾಗ ಅಥವಾ ಕುಡಿಯುವಾಗ ಮುಖವಾಡ ಧರಿಸಲು ಸಾಧ್ಯವಿಲ್ಲ. ಅದರ ಅಧಿಸೂಚನೆಯ ಬಗ್ಗೆ ಸರ್ಕಾರ ಸ್ಪಷ್ಟವಾಗಿಲ್ಲ. ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳುವುದು ನಾಗರಿಕರ  ಜವಾಬ್ದಾರಿಯಾಗಿದೆ. ವಾಣಿಜ್ಯ ಸಂಸ್ಥೆಗಳ ಮಾಲೀಕರು ತಿನ್ನುವುದು ಮತ್ತು ಕುಡಿಯುವುದನ್ನು ಹೊರತುಪಡಿಸಿ ಗ್ರಾಹಕರು ಎಲ್ಲಾ ಸಮಯದಲ್ಲೂ ಮುಖವಾಡ ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮಾರ್ಷಲ್‌ಗಳು ಮತ್ತು ಆರೋಗ್ಯ ಅಧಿಕಾರಿಗಳು ಪ್ರತಿ ಘಟಕಕ್ಕೂ ಹೋಗಿ ಜನರು ಮಾಸ್ಕ್ ಧರಿಸಿದ್ದಾರೆಯೇ ಎಂದು ಪರಿಶೀಲಿಸಲು ಸಾಧ್ಯವಿಲ್ಲ. ಅಂತಹ ಸಂದರ್ಭಗಳಲ್ಲಿ, ಅಂಗಡಿ ಮಾಲೀಕರು ಜವಾಬ್ದಾರಿಯುತವಾಗಿ ವರ್ತಿಸಬೇಕು ಮತ್ತು ಜಾಗೃತಿ ಮೂಡಿಸಬೇಕು. ಆದರೆ ಸರ್ಕಾರದ ಆದೇಶಗಳು ಇತರ ಜನರ  ತಪ್ಪುಗಳಿಗೆ ಮಾಲೀಕರನ್ನು ಹೊಣೆಗಾರರನ್ನಾಗಿ ಮಾಡುತ್ತಿದೆ, ಅದು ಸ್ವೀಕಾರಾರ್ಹವಲ್ಲ. ಸರ್ಕಾರವು ದಂಡವನ್ನು ಬೊಕ್ಕಸಕ್ಕೆ ಆದಾಯದ ಮೂಲವಾಗಿ ನೋಡಬಾರದು, ಆದರೆ ಅವುಗಳನ್ನು ತಡೆಗಟ್ಟಲು ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.

ಭೇಟಿ ಬಳಿಕ ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು, 'ಇದು ಸರ್ಕಾರದ ಆದೇಶ ಎಂದು ನಾವು ಅವರಿಗೆ ತಿಳಿಸಿದ್ದೇವೆ ಮತ್ತು ಬೆಂಗಳೂರಿಗೆ ಏನು ಮಾಡಬೇಕೆಂಬುದನ್ನು ಬಿಬಿಎಂಪಿ ಹೊರಡಿಸಿದೆ. ಸಲಹೆಯನ್ನು ಪರಿಶೀಲನೆಗಾಗಿ ಸರ್ಕಾರಕ್ಕೆ ತಿಳಿಸಲಾಗುವುದು. ಹೆಚ್ಚಿನ ಪ್ರಯತ್ನದಿಂದ,  ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಮತ್ತು ಪ್ರಕರಣಗಳು ಹೆಚ್ಚಾಗದಂತೆ ನೋಡಿಕೊಳ್ಳುವುದು ಈಗ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇನ್ನು ಈ ಹಿಂದೆ ಸಾಂಕ್ರಮಿಕ ರೋಗಗಳ ಸುಗ್ರೀವಾಜ್ಞೆ ನಿಯಮದನ್ವಯ ನಿಯಮ ಉಲ್ಲಂಘನೆ ಮಾಡಿದರೆ ಈ ದಂಡ ವಿಧಿಸಲಾಗುವುದು. ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರತ ಆರೋಗ್ಯ ನಿರೀಕ್ಷಕರು ಹಾಗೂ ವಾರ್ಡ್‌ ಮಾರ್ಷಲ್ ದಂಡ ವಿಧಿಸಿಬಹುದು. 10 ಸಾವಿರ ರೂ.ನಿಂದ 1 ಲಕ್ಷದವರೆಗೆ ದಂಡ  ವಿಧಿಸಲು ಬಿಬಿಎಂಪಿ ಕಮಿಷನರ್ ಮಂಜುನಾಥ್‌ ಪ್ರಸಾದ್ ಆದೇಶ ಹೊರಡಿಸಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT