ಗೋವಿಂದ್ ಕಾರಜೋಳ - ವಿಜಯಬಾಸ್ಕರ್ 
ರಾಜ್ಯ

ಬಂಗಾರದ ಕಿರೀಟವನ್ನು ಸರ್ಕಾರಕ್ಕೆ ಒಪ್ಪಿಸಿದ ಗೋವಿಂದ ಕಾರಜೋಳ

ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮಸ್ಥರು ತಮಗೆ ನೀಡಿದ್ದ ಬಂಗಾರದ ಕಿರೀಟವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಗುರುವಾರ ವಿಧಾನಸೌಧದಲ್ಲಿ ಮುಖ್ಯಕಾರ್ಯದರ್ಶಿಯರ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.

ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮಸ್ಥರು ತಮಗೆ ನೀಡಿದ್ದ ಬಂಗಾರದ ಕಿರೀಟವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಗುರುವಾರ ವಿಧಾನಸೌಧದಲ್ಲಿ ಮುಖ್ಯಕಾರ್ಯದರ್ಶಿಯರ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.

ನಂತರ ಮಾತನಾಡಿದ ಗೋವಿಂದ ಕಾರಜೋಳ, ತಮ್ಮ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು. ತಾವು ಈ ಗ್ರಾಮದ ಅಭಿವೃದ್ಧಿಗಾಗಿ ಸಲ್ಲಿಸಿದ ಗಣನೀಯ ಸೇವೆ, ಗ್ರಾಮದ ಅಭಿವೃದ್ಧಿಗಾಗಿ ಅತ್ತ್ಯುತ್ತಮ ಯೋಜನೆಗಳ ಅನುಷ್ಠಾನ, ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ, ತಮ್ಮೂರಿನ ಮನೆಯ ಮಗ ಉಪಮುಖ್ಯಮಂತ್ರಿಯಾಗಿದ್ದಕ್ಕಾಗಿ ಪ್ರೀತಿ ಗೌರವದಿಂದ ಈ ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು ಎಂದರು.

ಕಳೆದ 6 ವರ್ಷಗಳಿಂದ ಸನ್ಮಾನ ಮಾಡಿ, ಸಮರ್ಪಿಸಲು ಪ್ರಯತ್ನಿಸಿದ್ದರು. ಆದರೆ ಸಾಧ್ಯವಾಗಿರಲಿಲ್ಲ. ನವೆಂಬರ್ 23 ರಂದು ಈ ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ದಿ ಕಾರ್ಯಕ್ರಮದಲ್ಲಿ ಒತ್ತಾಯ ಪೂರ್ವಕವಾಗಿ ಅಭಿಮಾನ, ಪ್ರೀತಿ ವಿಶ್ವಾಸ, ಗೌರವದಿಂದ  ಸನ್ಮಾನಿಸಿ, ಈ ಚಿನ್ನದ ಕಿರೀಟವನ್ನು ನೀಡಿದರು ಎಂದು ಡಿಸಿಎಂ ಹೇಳಿದರು.

ತಾವು ಶಾಸಕ, ಮಂತ್ರಿಯಾಗಿ ಮಾಡಿದ ಸೇವೆಯನ್ನು ಪರಿಗಣಿಸಿ ಪೀತಿ, ಗೌರವದಿಂದ ಸನ್ಮಾನಿಸಿದ್ದು, ಈ ಸನ್ಮಾನವು  ಸರ್ಕಾರಕ್ಕೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಈ ಬಂಗಾರದ ಕಿರೀಟವನ್ನು ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಬಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಒಪ್ಪಿಸಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT