ಬಿಬಿಎಂಪಿ 
ರಾಜ್ಯ

ಬೆಂಗಳೂರಿನ ವಾರ್ಡ್ ಗಳನ್ನು 243 ಕ್ಕೆ ಏರಿಸುವ ಮಸೂದೆ ಅಂಗೀಕಾರ

ಬೆಂಗಳೂರು ನಗರದ ವಾರ್ಡ್ ಗಳನ್ನು 243 ಕ್ಕೆ ಏರಿಕೆ ಮಾಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಸೂದೆ-2020 ನ್ನು ಕರ್ನಾಟಕ ಸರ್ಕಾರ ವಿಧಾನಮಂಡಲ ಅಧಿವೇಶನದಲ್ಲಿ ಡಿ.10 ರಂದು ಅಂಗೀಕರಿಸಿದೆ.

ಬೆಂಗಳೂರು: ಬೆಂಗಳೂರು ನಗರದ ವಾರ್ಡ್ ಗಳನ್ನು 243 ಕ್ಕೆ ಏರಿಕೆ ಮಾಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಸೂದೆ-2020 ನ್ನು ಕರ್ನಾಟಕ ಸರ್ಕಾರ ವಿಧಾನಮಂಡಲ ಅಧಿವೇಶನದಲ್ಲಿ ಡಿ.10 ರಂದು ಅಂಗೀಕರಿಸಿದೆ.

ವಿಪಕ್ಷಗಳ ಸದಸ್ಯರ ಅನುಪಸ್ಥಿತಿಯಲ್ಲಿ ಮಸೂದೆ ಅಂಗೀಕಾರಗೊಂಡಿದೆ. ಮಸೂದೆಯ ಬಗ್ಗೆ ಮಾತನಾಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ, ಈ ಮಸೂದೆಯ ಉದ್ದೇಶ ಬೆಂಗಳೂರಿನ 198 ವಾರ್ಡ್ ಗಳನ್ನು 243 ಕ್ಕೆ ಏರಿಕೆ ಮಾಡುವುದಷ್ಟೆ ಅಲ್ಲದೇ ಬಿಬಿಎಂಪಿಯ ಸರಹದ್ದಿನಲ್ಲಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳನ್ನೂ ಬಿಬಿಎಂಪಿಗೆ ಒಳಗೊಳ್ಳುವಂತೆ ಮಾಡುವುದಾಗಿದೆ ಎಂದು ಹೇಳಿದ್ದಾರೆ.

ಈಗ ಬಿಬಿಎಂಪಿ ವ್ಯಾಪ್ತಿಯಿಂದ ಹೊರಗಿರುವ ಪ್ರದೇಶಗಳನ್ನು ಕನಿಷ್ಟ 1 ಕಿ.ಮೀ ವರೆಗೂ ಸೇರಿಸಿಕೊಂಡು, ಎಲೆಕ್ಟ್ರಾನಿಕ್ ಸಿಟಿ, ಮಹದೇವಪುರದ ಹೊರವಲಯದಲ್ಲಿರುವ ಕೆಲವು ಐಟಿ ಪಾರ್ಕ್ ಗಳನ್ನು ಬಿಬಿಎಂಪಿ ವ್ಯಾಪ್ತಿಗೆ ತೆಗೆದುಕೊಂಡು ಅದರ ಆದಾಯ ಹೆಚ್ಚಿಸುವಂತೆ ಮಾಡುವುದಕ್ಕೂ ಈ ಮಸೂದೆ ಸಹಕಾರಿಯಾಗಿದೆ.

ಗೋಹತ್ಯೆ ನಿಷೇಧ ಮಸೂದೆಯನ್ನು ಅಜೆಂಡಾದಲ್ಲಿ ಸೇರಿಸದೇ ಬಿಜೆಪಿ ಅಂಗೀಕಾರ ಪಡೆದಿದ್ದನ್ನು ವಿರೋಧಿಸಿ ಕಾಂಗ್ರೆಸ್ ಕಲಾಪವನ್ನು ಬಹಿಷ್ಕರಿಸಿದ್ದರೆ, ಜೆಡಿಎಸ್ ಮಸೂದೆ ಅಂಗೀಕಾರದ ವೇಳೆ ಕಲಾಪದಿಂದ ಹೊರನಡೆಯಿತು.

ಮೇಯರ್ ಹಾಗೂ ಉಪ ಮೇಯರ್ ಅವರ ಅಧಿಕಾರಾವಧಿಯನ್ನು ಒಂದು ವರ್ಷದಿಂದ 2 ವರೆ ವರ್ಷಕ್ಕೆ ಏರಿಕೆ ಮಾಡಲಾಗಿದೆ ಎಂದೂ ಮಾಧುಸ್ವಾಮಿ ಮಸೂದೆ ಬಗ್ಗೆ ತಿಳಿಸಿದ್ದಾರೆ.

ಪ್ರತಿ ವಿಧಾನಸಭಾ ವ್ಯಾಪ್ತಿಗೂ ಈಗ 6-8 ವಾರ್ಡ್ ಗಳಿದ್ದು ಇನ್ನು ಮುಂದೆ 3-4 ವಾರ್ಡ್ ಗಳಷ್ಟೇ ಇದ್ದು, ಆಡಳಿತಕ್ಕೆ ಸುಲಭವಾಗಲಿದೆ. ಝೋನ್ ಗಳನ್ನು 8-15 ಕ್ಕೆ ಏರಿಕೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಬಿಬಿಎಂಪಿಯ ಹೊಸ ವ್ಯಾಪ್ತಿಗೆ ಗ್ರಾಮ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿಗಳನ್ನೂ ಸೇರಿಸಿಕೊಳ್ಳುವುದು ಮಸೂದೆಯ ಉದ್ದೇಶವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT