ಬಿಬಿಎಂಪಿ 
ರಾಜ್ಯ

ಬೆಂಗಳೂರಿನ ವಾರ್ಡ್ ಗಳನ್ನು 243 ಕ್ಕೆ ಏರಿಸುವ ಮಸೂದೆ ಅಂಗೀಕಾರ

ಬೆಂಗಳೂರು ನಗರದ ವಾರ್ಡ್ ಗಳನ್ನು 243 ಕ್ಕೆ ಏರಿಕೆ ಮಾಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಸೂದೆ-2020 ನ್ನು ಕರ್ನಾಟಕ ಸರ್ಕಾರ ವಿಧಾನಮಂಡಲ ಅಧಿವೇಶನದಲ್ಲಿ ಡಿ.10 ರಂದು ಅಂಗೀಕರಿಸಿದೆ.

ಬೆಂಗಳೂರು: ಬೆಂಗಳೂರು ನಗರದ ವಾರ್ಡ್ ಗಳನ್ನು 243 ಕ್ಕೆ ಏರಿಕೆ ಮಾಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಸೂದೆ-2020 ನ್ನು ಕರ್ನಾಟಕ ಸರ್ಕಾರ ವಿಧಾನಮಂಡಲ ಅಧಿವೇಶನದಲ್ಲಿ ಡಿ.10 ರಂದು ಅಂಗೀಕರಿಸಿದೆ.

ವಿಪಕ್ಷಗಳ ಸದಸ್ಯರ ಅನುಪಸ್ಥಿತಿಯಲ್ಲಿ ಮಸೂದೆ ಅಂಗೀಕಾರಗೊಂಡಿದೆ. ಮಸೂದೆಯ ಬಗ್ಗೆ ಮಾತನಾಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ, ಈ ಮಸೂದೆಯ ಉದ್ದೇಶ ಬೆಂಗಳೂರಿನ 198 ವಾರ್ಡ್ ಗಳನ್ನು 243 ಕ್ಕೆ ಏರಿಕೆ ಮಾಡುವುದಷ್ಟೆ ಅಲ್ಲದೇ ಬಿಬಿಎಂಪಿಯ ಸರಹದ್ದಿನಲ್ಲಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳನ್ನೂ ಬಿಬಿಎಂಪಿಗೆ ಒಳಗೊಳ್ಳುವಂತೆ ಮಾಡುವುದಾಗಿದೆ ಎಂದು ಹೇಳಿದ್ದಾರೆ.

ಈಗ ಬಿಬಿಎಂಪಿ ವ್ಯಾಪ್ತಿಯಿಂದ ಹೊರಗಿರುವ ಪ್ರದೇಶಗಳನ್ನು ಕನಿಷ್ಟ 1 ಕಿ.ಮೀ ವರೆಗೂ ಸೇರಿಸಿಕೊಂಡು, ಎಲೆಕ್ಟ್ರಾನಿಕ್ ಸಿಟಿ, ಮಹದೇವಪುರದ ಹೊರವಲಯದಲ್ಲಿರುವ ಕೆಲವು ಐಟಿ ಪಾರ್ಕ್ ಗಳನ್ನು ಬಿಬಿಎಂಪಿ ವ್ಯಾಪ್ತಿಗೆ ತೆಗೆದುಕೊಂಡು ಅದರ ಆದಾಯ ಹೆಚ್ಚಿಸುವಂತೆ ಮಾಡುವುದಕ್ಕೂ ಈ ಮಸೂದೆ ಸಹಕಾರಿಯಾಗಿದೆ.

ಗೋಹತ್ಯೆ ನಿಷೇಧ ಮಸೂದೆಯನ್ನು ಅಜೆಂಡಾದಲ್ಲಿ ಸೇರಿಸದೇ ಬಿಜೆಪಿ ಅಂಗೀಕಾರ ಪಡೆದಿದ್ದನ್ನು ವಿರೋಧಿಸಿ ಕಾಂಗ್ರೆಸ್ ಕಲಾಪವನ್ನು ಬಹಿಷ್ಕರಿಸಿದ್ದರೆ, ಜೆಡಿಎಸ್ ಮಸೂದೆ ಅಂಗೀಕಾರದ ವೇಳೆ ಕಲಾಪದಿಂದ ಹೊರನಡೆಯಿತು.

ಮೇಯರ್ ಹಾಗೂ ಉಪ ಮೇಯರ್ ಅವರ ಅಧಿಕಾರಾವಧಿಯನ್ನು ಒಂದು ವರ್ಷದಿಂದ 2 ವರೆ ವರ್ಷಕ್ಕೆ ಏರಿಕೆ ಮಾಡಲಾಗಿದೆ ಎಂದೂ ಮಾಧುಸ್ವಾಮಿ ಮಸೂದೆ ಬಗ್ಗೆ ತಿಳಿಸಿದ್ದಾರೆ.

ಪ್ರತಿ ವಿಧಾನಸಭಾ ವ್ಯಾಪ್ತಿಗೂ ಈಗ 6-8 ವಾರ್ಡ್ ಗಳಿದ್ದು ಇನ್ನು ಮುಂದೆ 3-4 ವಾರ್ಡ್ ಗಳಷ್ಟೇ ಇದ್ದು, ಆಡಳಿತಕ್ಕೆ ಸುಲಭವಾಗಲಿದೆ. ಝೋನ್ ಗಳನ್ನು 8-15 ಕ್ಕೆ ಏರಿಕೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಬಿಬಿಎಂಪಿಯ ಹೊಸ ವ್ಯಾಪ್ತಿಗೆ ಗ್ರಾಮ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿಗಳನ್ನೂ ಸೇರಿಸಿಕೊಳ್ಳುವುದು ಮಸೂದೆಯ ಉದ್ದೇಶವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT