ಡಾ ಸಿ ಎನ್ ಅಶ್ವಥ್ ನಾರಾಯಣ್ 
ರಾಜ್ಯ

ಐಟಿ ಉದ್ಯೋಗಿಗಳು ಸದ್ಯಕ್ಕೆ ಆಫೀಸ್ ಗೆ ಹೋಗುವ ಅಗತ್ಯವಿಲ್ಲ, ಮನೆಯಿಂದಲೇ ಕೆಲಸ ಆಯ್ಕೆ: ರಾಜ್ಯ ಸರ್ಕಾರ 

ಕೋವಿಡ್-19 ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ ಐಟಿ ಕಂಪೆನಿಗಳು ಕಚೇರಿಗಳನ್ನು ತೆರೆಯಬೇಕೆಂದು ಹೇಳುವುದಿಲ್ಲ, ಮನೆಯಿಂದಲೇ ಕೆಲಸ ಮಾಡುವ ಈಗಿನ ವ್ಯವಸ್ಥೆ ಇನ್ನು ಕೆಲ ತಿಂಗಳುಗಳವರೆಗೆ ಮುಂದುವರಿಯಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಐಟಿ ಬಿಟಿ ಖಾತೆ ಉಸ್ತುವಾರಿ ಹೊತ್ತಿರುವ ಡಾ ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಬೆಂಗಳೂರು: ಕೋವಿಡ್-19 ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ ಐಟಿ ಕಂಪೆನಿಗಳು ಕಚೇರಿಗಳನ್ನು ತೆರೆಯಬೇಕೆಂದು ಹೇಳುವುದಿಲ್ಲ, ಮನೆಯಿಂದಲೇ ಕೆಲಸ ಮಾಡುವ ಈಗಿನ ವ್ಯವಸ್ಥೆ ಇನ್ನು ಕೆಲ ತಿಂಗಳುಗಳವರೆಗೆ ಮುಂದುವರಿಯಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಐಟಿ ಬಿಟಿ ಖಾತೆ ಉಸ್ತುವಾರಿ ಹೊತ್ತಿರುವ ಡಾ ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಕಚೇರಿಗಳನ್ನು ತೆರೆಯಿರಿ ಎಂದು ಸದ್ಯದ ಪರಿಸ್ಥಿತಿಯಲ್ಲಿ ಐಟಿ ಕಂಪೆನಿಗಳಿಗೆ ಕಡ್ಡಾಯ ಮಾಡಲು ಸಾಧ್ಯವಿಲ್ಲ, ಅದರ ಬದಲು ಉದ್ಯೋಗಿಗಳು ತಾವಿರುವಲ್ಲಿಂದಲೇ ಅಥವಾ ತಮ್ಮ ತಮ್ಮ ಮನೆಗಳಿಂದ ಕೆಲಸ ಮಾಡುವ ಸೌಲಭ್ಯವನ್ನು ಇನ್ನು ಕೆಲ ತಿಂಗಳುಗಳ ಮಟ್ಟಿಗೆ ಮುಂದೂಡಲಾಗುವುದು ಎಂದರು.

ನನ್ನೆ ವಿಧಾನಸಭೆಯಲ್ಲಿ ಹೊಸಕೋಟೆಯ ಸ್ವತಂತ್ರ ಶಾಸಕ ಶರತ್ ಬಚ್ಚೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದರು. 
ಈ ಕೊರೋನಾ ಸಾಂಕ್ರಾಮಿಕ ರೋಗ ಕಡಿಮೆಯಾದ ನಂತರ ಪರಿಸ್ಥಿತಿ ನೋಡಿಕೊಂಡು ಐಟಿ-ಬಿಟಿ ಕಂಪೆನಿಗಳೇ ಕಚೇರಿಗಳನ್ನು ತೆರೆಯಲಿವೆ. ಸದ್ಯದ ಪರಿಸ್ಥಿತಿಯಲ್ಲಿ ಇನ್ನೂ ಕೂಡ ಉದ್ಯೋಗಿಗಳು ಕಚೇರಿಗೆ ಹೋಗಿ ಕೆಲಸ ಮಾಡಬಹುದಾದ ವಾತಾವರಣವಿಲ್ಲ ಎಂದರು.

ಇನ್ನೂ ಬಹುತೇಕ ಐಟಿ ಕಂಪೆನಿಗಳ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಿದ್ದು ಇದರಿಂದ ಕಾರ್ಯವೈಖರಿ ಮೇಲೆ, ಕೆಲಸದ ಉತ್ಪನ್ನದ ಮೇಲೆ ಪರಿಣಾಮ ಬೀರುತ್ತಿದೆ, ಹೀಗಾಗಿ ಐಟಿ-ಬಿಟಿ ಕಂಪೆನಿಗಳನ್ನು ಆರಂಭಿಸಲು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಶರತ್ ಬಚ್ಚೇಗೌಡ ಒತ್ತಾಯಿಸಿದರು. 

ಐಟಿ ಕಂಪೆನಿಗಳು ತೆರೆಯದಿರುವುದರಿಂದ ಉದ್ಯೋಗಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಕ್ಯಾಬ್ ಸಾರಿಗೆಗಳು, ಕ್ಯಾಂಟೀನ್ ಗಳ ಮೂಲಕ ಜೀವನ ನಿರ್ವಹಣೆಗೆ ನಂಬಿಕೊಂಡಿದ್ದವರ ಮೇಲೆ ಪರಿಣಾಮ ಬೀರಿದೆ ಎಂದು ಉಡುಪಿ ಶಾಸಕ ಕೆ ರಘುಪತಿ ಭಟ್ ಕೂಡ ಹೇಳಿದರು. 

ಅದಕ್ಕೆ ಉತ್ತರಿಸಿದ ಅಶ್ವಥ್ ನಾರಾಯಣ್, ಒಂದು ಸಲ ಕಚೇರಿ ತೆರೆದರೆ ಇತರ ಸೇವೆಗಳು ಸಹ ಮೊದಲಿನ ಸ್ಥಿತಿಗೆ ಬರುತ್ತವೆ, ಆದರೆ ಇನ್ನೂ ಕೊರೋನಾ ಸೋಂಕು ಸಂಪೂರ್ಣವಾಗಿ ಇಳಿಮುಖವಾಗದಿರುವುದರಿಂದ ಮನೆಯಿಂದಲೇ ಕೆಲಸ ಮಾಡುವುದು ಸುರಕ್ಷಿತ ಎಂದರು. 

ಕೋವಿಡ್-19 ಸೋಂಕು ಒಕ್ಕರಿಸಿದ ಮೇಲೆ ಕಳೆದ ಮಾರ್ಚ್ ತಿಂಗಳಿನಿಂದ ಬಹುತೇಕ ಐಟಿ ಕಂಪೆನಿಗಳು ತಮ್ಮ ಕಚೇರಿಗಳನ್ನು ಮುಚ್ಚಿದ್ದು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಸೌಲಭ್ಯವನ್ನು ನೀಡುತ್ತಿವೆ. 

ಕೇಂದ್ರ ಸರ್ಕಾರ ಡಿಸೆಂಬರ್ 31ರವರೆಗೆ ತನ್ನ ಮಾರ್ಗಸೂಚಿಯಲ್ಲಿ ಐಟಿ ಮತ್ತು ಬಿಪಿಒ ಕಂಪೆನಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಸೌಲಭ್ಯವನ್ನು ಒದಗಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT