ಹೈಕೋರ್ಟ್ 
ರಾಜ್ಯ

ನದಿ ಕಣಿವೆ, ಜಲ ವಿದ್ಯುತ್ ಯೋಜನೆಗಳ ಬಗ್ಗೆ ತಜ್ಞರ ಸಮಿತಿ ರಚನೆ ಪ್ರಶ್ನಿಸಿ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ 

ನದಿ ಕಣಿವೆ ಮತ್ತು ಜಲವಿದ್ಯುತ್ ಯೋಜನೆಗಳಿಗೆ ಸಂಬಂಧಪಟ್ಟಂತೆ ತಜ್ಞರ ಮೌಲ್ಯಮಾಪನ ಸಮಿತಿಯನ್ನು ಅಸಮರ್ಪಕವಾಗಿ ರಚಿಸಿದ್ದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಕುರಿತು ರಾಜ್ಯ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೊಟೀಸ್ ನೀಡಿದೆ.

ಬೆಂಗಳೂರು: ನದಿ ಕಣಿವೆ ಮತ್ತು ಜಲವಿದ್ಯುತ್ ಯೋಜನೆಗಳಿಗೆ ಸಂಬಂಧಪಟ್ಟಂತೆ ತಜ್ಞರ ಮೌಲ್ಯಮಾಪನ ಸಮಿತಿಯನ್ನು ಅಸಮರ್ಪಕವಾಗಿ ರಚಿಸಿದ್ದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಕುರಿತು ರಾಜ್ಯ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೊಟೀಸ್ ನೀಡಿದೆ.

ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ಧ ಕ್ವೊ-ವಾರಂಟೊ ರಿಟ್ ನ್ನು ಅರ್ಜಿದಾರರು ಬಯಸಿದ್ದು ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರನ್ನೊಳಗೊಂಡ ವಿಭಾಗೀಯ ಪೀಠ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ನೊಟೀಸ್ ಜಾರಿ ಮಾಡಿದೆ.

ಸಮಿತಿ ರಚಿಸುವಂತೆ ಕೇಂದ್ರ ಸರ್ಕಾರ ಕಳೆದ ಜುಲೈ 13ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಅರ್ಜಿದಾರರು, ಅಧಿಸೂಚನೆಯು ಅಲ್ಟ್ರಾ ವೈರ್‌ಗಳಾಗಿದ್ದು, ಅದು ‘ಅಧಿಕೃತೇತರ’ ಸದಸ್ಯ ಎಂದು ಕರೆಯಲ್ಪಡುವ ಹೊಸ ವರ್ಗದ ಸದಸ್ಯರನ್ನು ರಚಿಸಿದೆ ಎಂದು ಅರ್ಜಿ ಸಲ್ಲಿಸಿರುವ ಯುನೈಟೆಡ್ ಕನ್ಸರ್ವೇಶನ್ ಮೂವ್ ಮೆಂಟ್ ಚಾರಿಟೇಬಲ್ ವೆಲ್ಫೇರ್ ಟ್ರಸ್ಟ್  ವಾದಿಸಿದೆ.

ಅಧ್ಯಕ್ಷರು ಮತ್ತು ಸಮಿತಿಯ ಸದಸ್ಯರು ನಿಗದಿತ ಶಾಸನಬದ್ಧ ಅರ್ಹತೆಗಳನ್ನು ಪೂರೈಸುವುದಿಲ್ಲ. ಇದಲ್ಲದೆ, ಹೊಸ ಯೋಜನೆಗಳ ನಿರ್ಮಾಣಕ್ಕಾಗಿ ಅಥವಾ ಅಸ್ತಿತ್ವದಲ್ಲಿರುವ ಯೋಜನೆಗಳ ವಿಸ್ತರಣೆ ಅಥವಾ ಆಧುನೀಕರಣಕ್ಕೆ ಮುಂಚಿತವಾಗಿ ಪರಿಸರ ಅನುಮತಿಗಾಗಿ ವಿವಿಧ ಕ್ಷೇತ್ರಗಳಿಂದ ಅರ್ಜಿಗಳ ಆಕ್ಷೇಪಣೆ ಇರುವುದರಿಂದ, ಸಮಿತಿಯನ್ನು ಸರಿಯಾಗಿ ರಚಿಸಲು ಮತ್ತು ಅರ್ಹತೆಯನ್ನು ಆಯ್ಕೆ ಮಾಡಲು ಸಚಿವಾಲಯಕ್ಕೆ ನಿರ್ದೇಶನ ನೀಡಲಾಗುವುದು ಎಂದು ಅರ್ಜಿದಾರ ಪರ ವಕೀಲ ಪ್ರಿನ್ಸ್ ಇಸಾಕ್ ವಾದಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT