ಸಾಂದರ್ಭಿಕ ಚಿತ್ರ 
ರಾಜ್ಯ

ಗ್ರಾಮಗಳ ಮೇಲೆ ದಾಳಿ ಮಾಡುವ ಕಾಡುಮೃಗಗಳನ್ನು ಕೊಲ್ಲಲು ಬಂದೂಕು ಬಳಕೆಗೆ ಅನುಮತಿ ನೀಡಿ: ಬಿಜೆಪಿ ಶಾಸಕ

ಜಮೀನುಗಳ ಮೇಲೆ ದಾಳಿ ಮಾಡುವ ಮತ್ತು ರೈತರು ಬೆಳೆದ ಬೆಳೆಗಳಿಗೆ ಹಾನಿಮಾಡುವ ಕಾಡು ಪ್ರಾಣಿಗಳನ್ನು ಕೊಲ್ಲಲು ಕಾಡಂಚಿನಲ್ಲಿರುವ ಗ್ರಾಮಸ್ಥರಿಗೆ ಅನುಮತಿ ನೀಡಿ ಎಂದು ಬಿಜೆಪಿ ಶಾಸಕ ಅಗರಾ ಜ್ಞಾನೇಂದ್ರ ಅವರು ಆಗ್ರಹಿಸಿದ್ದಾರೆ.

ಬೆಂಗಳೂರು: ಜಮೀನುಗಳ ಮೇಲೆ ದಾಳಿ ಮಾಡುವ ಮತ್ತು ರೈತರು ಬೆಳೆದ ಬೆಳೆಗಳಿಗೆ ಹಾನಿಮಾಡುವ ಕಾಡು ಪ್ರಾಣಿಗಳನ್ನು ಕೊಲ್ಲಲು ಕಾಡಂಚಿನಲ್ಲಿರುವ ಗ್ರಾಮಸ್ಥರಿಗೆ ಅನುಮತಿ ನೀಡಿ ಎಂದು ಬಿಜೆಪಿ ಶಾಸಕ ಅಗರಾ ಜ್ಞಾನೇಂದ್ರ ಅವರು ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ಗ್ರಾಮಗಳಿಗೆ ದಾಳಿ ಮಾಡುವ ಕಾಡುಪ್ರಾಣಿಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಮಲ್ನಾಡ್ ಪ್ರದೇಶದ ಶಾಸಕರು ಕೂಡಲೇ ಕ್ರಮಕ್ಕೆ ಆಗ್ರಸಿಹಿಸಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ  ಬಿಜೆಪಿ ಶಾಸಕ ಅಗರಾ ಜ್ಞಾನೇಂದ್ರ ಅವರು ಕಾಡು ಪ್ರಾಣಿಗಳನ್ನು ಕೊಲ್ಲಲು ಶಸ್ತ್ರಾಸ್ತ್ರಗಳನ್ನು ಬಳಸಲು ಸರ್ಕಾರ ಅನುಮತಿಸಬೇಕೆಂದು ಒತ್ತಾಯಿಸಿದರು. 

"ಬಂದೂಕುಗಳನ್ನು ಬಳಸಲು ನಮಗೆ ಅನುಮತಿ ನೀಡಿ, ನಾವು ಪ್ರಾಣಿಗಳನ್ನು ಕೊಂದು ಅವುಗಳನ್ನು ನಿಯಂತ್ರಿಸುತ್ತೇವೆ ಎಂದು ಅವರು ಹೇಳಿದರು. ಬಹಳ ಹಿಂದಿನಿಂದಲೂ ಮಲೆನಾಡು ಪ್ರದೇಶಗಳಲ್ಲಿ ಆನೆಗಳ ಹಾವಳಿ ಇದೆ. ಗ್ರಾಮಗಳ ಮೇಲೆ ದಾಳಿ ಮಾಡುವ ಆನೆಗಳು ರೈತರು ಕಷ್ಟಪಟ್ಟು ಬೆಳೆದ ಬೆಳೆಗಳನ್ನು  ಹಾಳು ಮಾಡುತ್ತಿವೆ. ಹೀಗಾಗಿ ರೈತರು ಆಗಾಗ್ಗೆ ತಮ್ಮ ಸುಗ್ಗಿಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಸರ್ಕಾರವನ್ನು ಎಚ್ಚರಿಸುವ ಪ್ರಯತ್ನ ಮಾಡಿದರು.

ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಮುಡಿಗರೆ ಶಾಸಕ ಎಂ ಪಿ ಕುಮಾರಸ್ವಾಮಿ ತಮ್ಮ ಕ್ಷೇತ್ರದಲ್ಲಿ ಆನೆಗಳ ದಾಳಿ ಹೆಚ್ಚಾಗಿದ್ದು, ರೈತರು ತಮ್ಮ ಬೆಳೆಗಳನ್ನು ಬೆಳೆಯಲು ಇಡೀ ವರ್ಷ ಶ್ರಮಿಸುತ್ತಾರೆ, ಆದರೆ ಕೊಯ್ಲು ಅವಧಿ ಬಂದಾಗ, ಆನೆಗಳು ದಾಳಿ ಮಾಡಿ ಹಾನಿಮಾಡುತ್ತವೆ. ಇದನ್ನು ನಿಲ್ಲಿಸಬೇಕಾಗಿದೆ  ಎಂದು ಹೇಳಿದರು. ಸ್ಪೀಕರ್ ಕಾಗೇರಿ ಅವರು ಕೂಡ ಇದಕ್ಕೆ ಧನಿ ಸೇರಿಸಿ ಈಗ ದಾಳಿಗಳು ವಿಪರೀತವಾಗಿವೆ. ಅಂತೆಯೇ ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡಬೇಕು ಎಂದು ಕಾಗೇರಿ ಹೇಳಿದರು. "ಇದು ಕೇವಲ ಆನೆಗಳಿಂದ ಮಾತ್ರವಲ್ಲ, ರೈತರು ಹಂದಿಗಳು, ನವಿಲುಗಳು, ಕೋತಿಗಳು ಮತ್ತು ಇತರ ಪ್ರಾಣಿಗಳಿಂದಲೂ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕಾಗೇರಿ ಹೇಳಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT