ರಾಜ್ಯ

ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಪ್ರಧಾನಿ ಮೋದಿ ಸಹೋದರ ಸ್ವಾಗತ

Manjula VN

ತುಮಕೂರು: ಗೋವು ಕೇವಲ ಪ್ರಾಣಿಯಲ್ಲ, ಅದು ಒಂದು ತಾಯಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹೋದರ ಪ್ರಹ್ಲಾದ್ ಮೋದಿಯವರು ಅಭಿಪ್ರಾಯಪಟ್ಟಿದ್ದಾರೆ. 

ತುಮಕೂರಿನಲ್ಲಿ ಮಾತಾ ವೈಷ್ಣೋದೇವಿ ದೇವಸ್ಥಾನದಲ್ಲಿ ಪ್ರಾಣ ಪ್ರತಿಷ್ಟಾಪನೆ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾನೂನನ್ನು ಕರ್ನಾಟಕ ಸರ್ಕಾರ ಜಾರಿಗೆ ತರುವ ಮೂಲಕ ತಾಯಿ ಎಂಬುದನ್ನು ನಿರೂಪಿಸುವ ಪ್ರಯತ್ನ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಸರ್ಕಾರದ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ಹೇಳಿದ್ದಾರೆ. 

ಮಹಾವೀರ್, ಬುದ್ಧ ಹಾಗೂ ಮಹಾತ್ಮ ಗಾಂಧಿಯವರು ಬೋಧಿಸಿದ ಅಸಹಿಂಸೆಯನ್ನು ಜನರು ಅಕ್ಷರದಿಂದ ಹಾಗೂ ಸಾಕಷ್ಟು ಉತ್ಸಾಹದಿಂದ ಅಭ್ಯಾಸ ಮಾಡಬೇಕಿದೆ ಎಂದು ಇದೇ ವೇಳೆ ಸಲಹೆ ನೀಡಿದ್ದಾರೆ. 

SCROLL FOR NEXT