ರಾಜ್ಯ

ರಾಯಭಾಗ: ಮಹಿಳೆ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ದುಷ್ಕರ್ಮಿ

Raghavendra Adiga

ರಾಯಭಾಗ: ರಸ್ತೆ ಬದಿ ಬಾಳೆಹಣ್ಣು ಮಾರುತ್ತಿದ್ದ ಮಹಿಳೆ ಮೇಲೆ ಆ್ಯಸಿಡ್ ಎರಚಿದ ದುಷ್ಕರ್ಮಿಯೊಬ್ಬ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ಪಟ್ಟಣದಲ್ಲಿ ನಡೆದಿದೆ.

ಶುಕ್ರವಾರ ಸಂಜೆ  ಪಟ್ಟಣದ ಝಂಡಾ ಕಟ್ಟೆ ಬಳಿ ನಡೆದ ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಯಾರೆಂದು ಇದುವರೆಗೆ ಪತ್ತೆಯಾಗಿಲ್ಲ.ಹಳೆಯ ದ್ವೇಷದ ಹಿನ್ನೆಲೆ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.

ಘಟನೆ ಸಂಬಂಧ ರಾಯಭಾಗ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೋಲೀಸರು ತನಿಖೆ ನಡೆಸಿದ್ದಾರೆ.

SCROLL FOR NEXT