ಕೋಟ ಶ್ರೀನಿವಾಸ ಪೂಜಾರಿ 
ರಾಜ್ಯ

ಒಂದು ದಿನದ ಪರಿಷತ್ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಮನವಿ: ಕೋಟ ಶ್ರೀನಿವಾಸ ಪೂಜಾರಿ

ಬಹು ಚರ್ಚಿತ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲು, ಸಭಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕಾರಕ್ಕೆ ಅನುಕೂಲವಾಗುವಂತೆ  ಒಂದು ದಿನದ ವಿಧಾನ ಪರಿಷತ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. 

ಬೆಂಗಳೂರು: ಬಹು ಚರ್ಚಿತ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲು, ಸಭಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕಾರಕ್ಕೆ ಅನುಕೂಲವಾಗುವಂತೆ  ಒಂದು ದಿನದ ವಿಧಾನ ಪರಿಷತ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. 

ಪರಿಷತ್ತಿನ ಅಧ್ಯಕ್ಷರು ಸದನವನ್ನು ಹಠಾತ್ತನೆ ಮುಂದೂಡಿದ್ದ ಕಾರಣ ಇದಕ್ಕೆ ಅಡ್ಡಿಯಾಯಿತು ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ.ವಿರುದ್ಧ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ಆಗಬೇಕೆಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮೀನುಗಾರಿಕೆ ಸಚಿವರೂ ಆದ ವಿಧಾನ ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಇಂದು ಸಚಿವ, ಮೇಲ್ಮನೆ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಐದು ಸದಸ್ಯರ ಬಿಜೆಪಿ ನಿಯೋಗ ಸಭೆ ಸೇರಿ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿಯಾಗಿ ಪರಿಷತ್ ಅಧ್ಯಕ್ಷ ಪ್ರತಾಪ್ ಚಂದ್ರಶೆಟ್ಟಿ ವಿರುದ್ಧ ದೂರು ಸಲ್ಲಿಸಿದ್ದಾರೆ. ಸದನವನ್ನು ಹಠಾತ್ ಮುಂದೂಡಿಕೆ ಮಾಡಿರುವ ಸಂಬಂಧ ಅವರ ವಿರುದ್ಧ  ಕ್ರಮ ಕೈಗೊಳ್ಳುವಂತೆ ನಿಯೋಗವು ರಾಜ್ಯಪಾಲರಿಗೆ ಮನವಿ ಮಾಡಿತು.

"ಸಭಾಪತಿಯ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಚರ್ಚೆ ನಡೆಸಬೇಕಾಗಿತ್ತು. ಆದರೆ ಸಭಾಧ್ಯಕ್ಷರು ಚರ್ಚೆಗೆ ಅವಕಾಶ ನಿಡದೆ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ರಾಜ್ಯಪಾಲರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ." ಸಚಿವ ಪೂಜಾರಿ ಹೇಳಿದ್ದಾರೆ.

ಇನ್ನೊಂದೆಡೆ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ಪರಿಷತ್ತಿನ ಒಂದು ದಿನದ ಅಧಿವೇಶನ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆಎಂದು ಹೇಳಿದರು.

ಮೊದಲಿನಂತೆ ಪರಿಷತ್ ಅಧಿವೇಶನವನ್ನು ಡಿಸೆಂಬರ್ 17 ರವರೆಗೆ ಮುಂದುವರಿಸಲು ಮತ್ತು ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು, ಗೋಹತ್ಯೆ ನಿಷೇಧ ಸೂದೆ ಸೇರಿದಂತೆ ಹಲವಾರು ಮಸೂದೆಗಳನ್ನು ಅಂಗೀಕರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ ಅವರು, "ಪರಿಷತ್ ಅಧ್ಯಕ್ಷರು ಹಠಾತ್ತನೆ ಸದನ ಮುಂದೂಡಿಕೆ ಮಾಡಿದ್ದಾರೆ" ಎಂದದ್ದಲ್ಲದೆ ಅಧ್ಯಕ್ಷರ ಕ್ರಮವನ್ನು ಅಸ್ವಾಭಾವಿಕ ಎಂದು ಟೀಕಿಸಿದ ಮುಖ್ಯಮಂತ್ರಿ, ಮಸೂದೆಗೆ ತಿದ್ದುಪಡಿ ತರಲು ಅಧ್ಯಕ್ಷರು ರಾಜ್ಯ ಸರ್ಕಾರದೊಂದಿಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿದರು

"ಈಗಾಗಲೇ ಮಸೂದೆ ಕಾನೂನು ರೀತಿಯಲ್ಲಿ ಪರಿಣಾಮಕಾರಿಯಾಗುವಂತೆ ಸುಗ್ರೀವಾಜ್ಞೆಯನ್ನು ಪ್ರಕಟಿಸುವ ಯೋಜನೆಯನ್ನು ನಾವು ಹೊಂದಿದ್ದೇವೆ. ವಿಧಾನಸಭೆ ಇದಾಗಲೇ ಮಸೂದೆಯನ್ನು ಅಂಗೀಕರಿಸಿದೆ." ಅವರು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT