ಸಾಂದರ್ಭಿಕ ಚಿತ್ರ 
ರಾಜ್ಯ

ಕಸ್ತೂರಿ ರಂಗನ್ ವರದಿಯಿಂದ ಕರ್ನಾಟಕವನ್ನು ಹೊರಗಿಡಿ: ಸರ್ಕಾರಕ್ಕೆ ರೈತರ ಆಗ್ರಹ

ಡಾ.ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರ ತಡೆಯಬೇಕು. ರಾಷ್ಟ್ರೀಯ ಹಸಿರು ಪೀಠಕ್ಕೆ ಪುನರ್ ಪರಿಶೀಲನಾ ಪ್ರಮಾಣಪತ್ರ ಸಲ್ಲಿಸಲು ವಿನಂತಿಸಬೇಕು ಎಂದು ಜಿಲ್ಲಾ ಅಡಿಕೆ ಬೆಳೆಗಾರರ ಸಂಘ ಆಗ್ರಹಿಸಿದೆ.

ಶಿವಮೊಗ್ಗ: ಡಾ.ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರ ತಡೆಯಬೇಕು. ರಾಷ್ಟ್ರೀಯ ಹಸಿರು ಪೀಠಕ್ಕೆ ಪುನರ್ ಪರಿಶೀಲನಾ ಪ್ರಮಾಣಪತ್ರ ಸಲ್ಲಿಸಲು ವಿನಂತಿಸಬೇಕು ಎಂದು ಜಿಲ್ಲಾ ಅಡಿಕೆ ಬೆಳೆಗಾರರ ಸಂಘ ಆಗ್ರಹಿಸಿದೆ.

2014ರ ಲೋಕಸಭಾ ಚುನಾವಣೆ ವೇಳೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯದಲ್ಲಿ ಡಾ.ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಅವಕಾಶ ಕೊಡುವುದಿಲ್ಲ ಎಂದು ಬಿಜೆಪಿ ನೀಡಿದ ಭರವಸೆ ಸುಳ್ಳಾಗಿದೆ ಎಂದು ಅಡಿಕೆ ಬೆಳೆಗಾರರ ಸಂಘದ ಸಂಚಾಲಕ ಬಿ.ಎ.ರಮೇಶ್‌ ಹೆಗ್ಡೆ ಒತ್ತಾಯಿಸಿದ್ದಾರೆ.

ನಾಲ್ಕು ಬಾರಿ ಕೇಂದ್ರ ಸರ್ಕಾರ ರಾಜ್ಯದ 1,573 ಗ್ರಾಮಗಳನ್ನು ಒಳಗೊಂಡ ಪಶ್ಚಿಮಘಟ್ಟ ಪ್ರದೇಶವನ್ನು ‘ಪರಿಸರ ಸೂಕ್ಷ್ಮ ವಲಯ’ ಅಧಿಸೂಚನೆ ಹೊರಡಿಸಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು. 

ಕೇಂದ್ರದ ಅರಣ್ಯ ಹಾಗೂ ಪರಿಸರ ಸಚಿವ ಪ್ರಕಾಶ್ ಜಾವಡೆಕರ್ ಅವರು ರಾಷ್ಟ್ರೀಯ ಹಸಿರು ಪೀಠಕ್ಕೆ ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಳಿಸುವುದಾಗಿ ಪ್ರಮಾಣ ಪತ್ರ ಸಲ್ಲಿಸಿದ್ದರ ಫಲವಾಗಿ ಹಸಿರು ಪೀಠ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

2014ರಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದರೂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ನಾಟಕ ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿಲ್ಲ. ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ರಾಜ್ಯ ಬಿಜೆಪಿ ನಾಯಕರಿಗೆ ಚುನಾವಣಾ ಸಮಯದಲ್ಲಿ ಕಸ್ತೂರಿ ರಂಗನ್ ವರದಿ ನೆನಪಾಗುತ್ತದೆ. 

ಬಿ.ವೈ.ರಾಘವೇಂದ್ರ ಅವರು ಸಂಸದರಾಗಿ 7 ವರ್ಷ ಕಳೆದರೂ, ಒಮ್ಮೆಯೂ ಲೋಕಸಭಾ ಅಧಿವೇಶನದಲ್ಲಿ ವರದಿ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2017ರಲ್ಲಿ ಈ ವರದಿ ತಿರಸ್ಕರಿಸುವಂತೆ ಕ್ಯಾಬಿನೆಟ್ ನಿರ್ಣಯ ಕೈಗೊಂಡು ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿತ್ತು. ಆದರೂ, ಕೇಂದ್ರ ಪ್ರಮಾಣಪತ್ರ ಸಲ್ಲಿಸಿತ್ತು ಎಂದು ಖಂಡಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT