ಕಲಬುರಗಿ ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನ ಹರಾಜು 
ರಾಜ್ಯ

ಕೋಲಾರ ಗ್ರಾಮ ಪಂಚಾಯಿತಿ ಸ್ಥಾನ ಐದು ಲಕ್ಷಕ್ಕೆ ಹರಾಜು!

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವಂತಹ ಮತ್ತೊಂದು ಘಟನೆ ನಡೆದಿದೆ.  ಕೋಲಾರದ ಮದ್ದೇರಿ ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನವನ್ನು 5 ಲಕ್ಷ ರುಪಾಯಿಗೆ ಹರಾಜು ಹಾಕಲಾಗಿದೆ ಎಂದು ಆರೋಪಿಸಲಾಗಿದೆ

ಕೋಲಾರ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವಂತಹ ಮತ್ತೊಂದು ಘಟನೆ ನಡೆದಿದೆ.  ಕೋಲಾರದ ಮದ್ದೇರಿ ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನವನ್ನು 5 ಲಕ್ಷ ರುಪಾಯಿಗೆ ಹರಾಜು ಹಾಕಲಾಗಿದೆ ಎಂದು ಆರೋಪಿಸಲಾಗಿದೆ. 

ಮದ್ದೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 13 ಗ್ರಾಮಗಳು ಬರಲಿದ್ದು, ಅದರಲ್ಲಿ ಇರಸಂದ್ರ ಬೆಡ್ಲಿ ಎಂಬ ಗ್ರಾಮ ಪಂಚಾಯಿತಿ ಸದಸ್ಯತ್ವ ಸ್ಥಾನವನ್ನು ಹರಾಜು ಹಾಕಲಾಗಿದೆ. 

ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿಯಿರುವ ಅಭ್ಯರ್ಥಿಗಳನ್ನು ಬಿಡ್ ಮಾಡುತ್ತಾರೆ, ಹರಾಜಿನಲ್ಲಿ ಶ್ರೀರಾಮಪ್ಪ ಅವರು 5 ಲಕ್ಷ ರೂ.ಗಳ ಅತ್ಯಧಿಕ ಬಿಡ್ ನೀಡುವ ಮೂಲಕ ಗೆದ್ದಿದ್ದಾರೆ ಎನ್ನಲಾಗಿದೆ.

ಡಿಸೆಂಬರ್ 23 ರಂದು ಚುನಾವಣೆ ನಡೆದಾಗ ಗ್ರಾಮಸ್ಥರು ಅವರಿಗೆ ಸಾಮೂಹಿಕವಾಗಿ ಮತ ಚಲಾಯಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಈ ಮಾಹಿತಿ ತಾಲೂಕು ಆಡಳಿತಕ್ಕೆ ತಿಳಿದ ನಂತರ ತಹಶೀಲ್ದಾರ್ ವೇಮಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ರಾಜ್ಯಾದ್ಯಂತ ಇಂಥಹ ಘಟನೆಗಳು ಇತ್ತೀಚೆಗೆ ಹೆಚ್ಚಾಗಿದ್ದು, ತುಮಕೂರಿನ ದೊಡ್ಡನರವಂಗಲ ಗ್ರಾಮ ಪಂಚಾಯಿತಿಯ ಅಸ್ಲಿಪುರ ಸದಸ್ಯತ್ವ ಸ್ಥಾನ ಹರಾಜಾಗಿದೆ ಎನ್ನಲಾಗಿತ್ತು. ಇನ್ನು ಕಲಬುರಗಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲು ಗ್ರಾಮಪಂಚಾಯಿತಿ ಸದಸ್ಯತ್ವ ಸ್ಥಾನಗಳು ಹರಾಜಿನ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಹರಾಜು ಪ್ರಕ್ರಿಯೆ ನಡೆಯದಂತೆ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ, ಹೀಗಾಗಿ ಈ ದುಷ್ಕೃತ್ಯ ನಡೆಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು, ಇಂಥ ಘಟನೆಗಳು ಕಂಡು ಬಂದರೇ ತಿಳಿಸಬೇಕೆಂದು ಜಿಲ್ಲಾಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.

ಮುಕ್ತ ಮತ್ತು ನ್ಯಾಯಯುತ ಮತದಾನವನ್ನು ನಡೆಸುವುದು ನಮ್ಮ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ. ಹರಾಜು ಪ್ರಕ್ರಿಯೆ ಪ್ರತಿಯೊಂದು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತದೆ, ಈ ಬಾರಿ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT