ಕಾಂಗ್ರೆಸ್ ಲೋಗೋ 
ರಾಜ್ಯ

ಗ್ರಾಮ ಪಂಚಾಯಿತಿ ಸ್ಧಾನ ಹರಾಜು: ಕೆಪಿಸಿಸಿ ಅಸಮಾಧಾನ

ರಾಜ್ಯದಲ್ಲಿ ಡಿಸೆಂಬರ್ 23 ರಂದು ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ, ಕೆಲವು ಗ್ರಾಮಗಳಲ್ಲಿ ಪಂಚಾಯಿತಿ ಸದಸ್ಯರನ್ನು ಹರಾಜು ಪ್ರಕ್ರಿಯೆಯಲ್ಲಿ ಆಯ್ಕೆ ಮಾಡುತ್ತಿರುವುದು ವಿಷಾದನೀಯ.

ದಾವಣಗೆರೆ: ರಾಜ್ಯದಲ್ಲಿ ಡಿಸೆಂಬರ್ 23 ರಂದು ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ, ಕೆಲವು ಗ್ರಾಮಗಳಲ್ಲಿ ಪಂಚಾಯಿತಿ ಸದಸ್ಯರನ್ನು ಹರಾಜು ಪ್ರಕ್ರಿಯೆಯಲ್ಲಿ ಆಯ್ಕೆ ಮಾಡುತ್ತಿರುವುದು ವಿಷಾದನೀಯ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ.ಎಲ್. ಹರೀಶ್ ಬಸಾಪುರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂತಹ ಪ್ರಕ್ರಿಯೆಗಳಿಂದ ಕೇವಲ ಹಣ ಇದ್ದವರು ಮಾತ್ರ ಆಯ್ಕೆಯಾಗಲು ಸಾಧ್ಯವಾಗುತ್ತಿದ್ದು, ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಮಾನರು ಎಂದು ಹೇಳುವುದು ಕೇವಲ ವಾಕ್ಯವಾಗಿ ಉಳಿಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಸರ್ಕಾರ ಕೇವಲ ಮಾತಿನಲ್ಲಿ ಈ ತರಹದ ಆಯ್ಕೆಯನ್ನು ಅನುರ್ಜಿತಗೊಳಿಸುವುದಾಗಿ ತಿಳಿಸಿ, ಜಾಣಕಿವುಡು ತೋರದೆ ಸೂಕ್ತ ಕ್ರಮ ತೆಗೆದುಕೊಂಡು ಚುನಾವಣೆ ನಡೆಸಬೇಕು ಇಲ್ಲವೇ ಪೂರ್ಣ ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಿಷೇಧಿಸಿ ಆಡಳಿತ ಅಧಿಕಾರಿಗಳ ಮೂಲಕ ಪಂಚಾಯಿತಿಗಳನ್ನು ನಿರ್ವಹಣೆ ಮಾಡಬೇಕು.

ದೇವಸ್ಥಾನಗಳಿಗೆ ಹಣ ಸಂಗ್ರಹಿಸಲು ಹರಾಜು ಮೂಲಕ ಸದಸ್ಯರನ್ನು ಆಯ್ಕೆ ಮಾಡುವುದರಿಂದ ಮತದಾರರ ಮತದಾನದ ಹಕ್ಕು ಇಲ್ಲದಂತಾಗುತ್ತದೆ, ಮತದಾರರಿಗೆ ಆ ವ್ಯಕ್ತಿಯ ಮೇಲೆ ನಂಬಿಕೆ ಇಲ್ಲದಿದ್ದರೂ ಸಹ ಹರಾಜಿನಲ್ಲಿ ಆಯ್ಕೆಯಾದ ಎಂಬ ಒಂದೇ ಉದ್ದೇಶದಿಂದ ಸುಮ್ಮನಿರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮತದಾರರನ್ನು ಮತಯಾಚನೆ ಮಾಡದೆ ಆಯ್ಕೆಯಾದ ಸದಸ್ಯ ಮುಂದೆ ಮತದಾರರ ಕಷ್ಟಸುಖಗಳಿಗೆ ಭಾಗಿಯಾಗುವ ಯಾವುದೇ ನಂಬಿಕೆ ಇರುವುದಿಲ್ಲ, ಆದ್ದರಿಂದ ಈ ತರಹದ   ವ್ಯವಸ್ಥೆಗೆ ಕೊನೆ ಮಾಡಬೇಕು ಜನರಿಂದಲೇ ಆಯ್ಕೆಯಾದ ಸದಸ್ಯರಿಗೆ ಮಾತ್ರ ಪಂಚಾಯಿತಿ ಸದಸ್ಯರ ಅರ್ಹತೆ ಎಂಬ ಕಾನೂನು ತರಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

SCROLL FOR NEXT