ಸಚಿವ ಆರ್.ಅಶೋಕ್ 
ರಾಜ್ಯ

ಕೃಷಿ ಕಾಯ್ದೆ: ಜನರಲ್ಲಿ ಜಾಗೃತಿ ಮೂಡಿಸಲು ಶೀಘ್ರದಲ್ಲೇ ಬಿಜೆಪಿಯಿಂದ ಅಭಿಯಾನ

ಕೇಂದ್ರದ 3 ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿರೈತರು ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆ ಕುರಿತ ರೈತರ ಅನುಮಾನ ನಿವಾರಿಸಲು ಮತ್ತು ಕಾಯ್ದೆಯನ್ನು ಸಮರ್ಥಿಸುವ ಸಲುವಾಗಿ ಅಭಿಯಾನ ನಡೆಸಲು ಬಿಜೆಪಿ ನಿರ್ಧರಿಸಿದೆ. 

ಬೆಂಗಳೂರು: ಕೇಂದ್ರದ 3 ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿರೈತರು ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆ ಕುರಿತ ರೈತರ ಅನುಮಾನ ನಿವಾರಿಸಲು ಮತ್ತು ಕಾಯ್ದೆಯನ್ನು ಸಮರ್ಥಿಸುವ ಸಲುವಾಗಿ ಅಭಿಯಾನ ನಡೆಸಲು ಬಿಜೆಪಿ ನಿರ್ಧರಿಸಿದೆ. 

ಈ ಕುರಿತು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್ ಹಾಗೂ ಎಸ್'ಟಿ ಸೋಮಶೇಖರ್ ಅವರು, ನಾಲ್ಕು ವಿವಿಧ ಭಾಗಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಬೆಂಗಳೂರಿನಲ್ಲಿ ನಡೆಯುವ ಅಭಿಯಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದಾರೆಂದು ಹೇಳಿದ್ದಾರೆ. 

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಕುರಿತಂತೆ ಮಾತನಾಡಿದ ಅಶೋಕ್ ಅವರು, ರೈತರು ಭೂಮಿಯನ್ನು ಮಾರಲು ಮುಂದಾದರೆ, ಮಧ್ಯವರ್ತಿಗಳಿಗೆ ಹೆಚ್ಚೆಚ್ಚು ಲಾಭವಾಗುತ್ತಿತ್ತು. ಪ್ರಸ್ತುತ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಕಾಯ್ದೆಗಳೂ ರೈತರ ಪರವಾಗಿಯೇ ಇವೆ. ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯನ್ನು ಮಾಡುವುದನ್ನು ಕಾಂಗ್ರೆಸ್ ಪ್ರಾರಂಭಿಸಿತು. ಇದೀಗ ನಾವು ಜಾರಿಗೆ ತಂದರೆ ಪ್ರತಿಭಟನೆ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ. 

ಇದೇ ವೇಳೆ ಗೋಹತ್ಯೆ ನಿಷೇಧ ಕಾಯ್ದೆ ಕುರಿತು ಮಾತನಾಡಿದ ಅವರು, ನಮ್ಮ ದೇಶದಲ್ಲಿ ಗೋವಿಗೆ ಅತ್ಯಂತ ಪವಿತ್ರ ಸ್ಥಾನವನ್ನು ನೀಡಲಾಗಿದೆ. ಸಿದ್ದರಾಮಯ್ಯ ಅವರು ವಯಸ್ಸಾದ ಹಸುಗಳನ್ನು ತಂದು ಬಿಜೆಪಿ ಕಚೇರಿಗೆ ಬಿಡಿ ಎಂದಿದ್ದಾರೆ. ವಯಸ್ಸಾದ ಹಸು, ವಯೋವೃದ್ಧರು ನಮ್ಮ ಬಳಿಗೇ ತಂದು ಬಿಡಿ. ಅವರನ್ನು ನಾವೇ ನೋಡಿಕೊಳ್ಳುತ್ತೇವೆ. ಕಾಯ್ದೆಗೆ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುವಂತೆ ಮಾಡಲು ಕಾಂಗ್ರೆಸ್ ಉದ್ದೇಶಿಸಿದೆ. ಈ ರೀತಿ ಆಗಲು ನಾವು ಬಿಡುವುದಿಲ್ಲ. ಹೀಗಾಗಿ ನಾವು ವಿಧಾನಪರಿಷತ್ ನಲ್ಲಿ ಮಸೂದೆ ಮಂಡನೆ ಮಾಡದಿರಲು ನಿರ್ಧರಿಸಿದ್ದೇವೆ. ಮುಂದಿನ ದಿನಗಳಲ್ಲಿ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸಿ, ಕಾಯ್ದೆ ಜಾರಿಗೆ ತರುತ್ತೇವೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Viral ವಿಡಿಯೋದಲ್ಲಿರುವುದು ನಾನಲ್ಲ, ಒಂದು ವೇಳೆ ನಾನೇ ಆಗಿದ್ದರೂ ಏನು ಇವಾಗ? ತಮಿಳುನಾಡು ಸಚಿವೆ ಕೀರ್ತನಾ ಕಿಡಿ! ಮಲೇಷ್ಯಾ ಮಹಿಳೆ ದೂರು ದಾಖಲು!