ಹಲಸೂರು ಕೆರೆ ಸ್ವಚ್ಛಗೊಳಿಸುತ್ತಿರುವ ಸಿಬ್ಬಂದಿಗಳು 
ರಾಜ್ಯ

ಹಲಸೂರು ಕೆರೆ ಸ್ವಚ್ಛತೆಗೆ ಕೈಜೋಡಿಸಿದ ಎಂಇಜಿ, ಬಿಬಿಎಂಪಿ ಸಿಬ್ಬಂದಿ

ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ಹಾಗೂ ಬಿಬಿಎಂಪಿ ಕೆರೆ ನಿರ್ವಹಣಾ ಸಿಬ್ಬಂದಿ ಜಂಟಿಯಾಗಿ ಹಲಸೂರು ಕೆರೆ ಸ್ವಚ್ಛತಾ ಕಾರ್ಯ ಭರದಿಂದ ನಡೆಯುತ್ತಿದೆ. 

ಬೆಂಗಳೂರು: ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ಹಾಗೂ ಬಿಬಿಎಂಪಿ ಕೆರೆ ನಿರ್ವಹಣಾ ಸಿಬ್ಬಂದಿ ಜಂಟಿಯಾಗಿ ಹಲಸೂರು ಕೆರೆ ಸ್ವಚ್ಛತಾ ಕಾರ್ಯ ಭರದಿಂದ ನಡೆಯುತ್ತಿದೆ. 

ಒಟ್ಟು 113 ಎಕರೆ ಇರುವ ಹಲಸೂರು ಕೆರೆಯನ್ನು ಕಳೆದ ಒಂದು ವಾರದಿಂದ ಬಿಬಿಎಂಪಿ ಕೆರೆಗಳ ನಿರ್ವಹಣಾ ಸಿಬ್ಬಂದಿ ಹಾಗೂ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಸಿಬ್ಬಂದಿ ಜಂಟಿಯಾಗಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ಶನಿವಾರ ಬಿಬಿಎಂಪಿಯ 80 ಮಂದಿ ಸಿಬ್ಬಂದಿ ಹಾಗೂ ಎಂಇಜಿಯ 150 ಸಿಬ್ಬಂದಿ ಐದು ಬೋಟ್ ಬಳಸಿ ಕಳೆಯನ್ನು ತೆರವುಗೊಳಿಸಿದರು. 

ಶನಿವಾರ ಹಲಸೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಕೆರೆ ಸ್ವಚ್ಛತಾ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿ ಎಂಇಜಿ ತರಬೇತಿ ಸ್ಥಳವಾದ ಹಲಸೂರು ಕೆರೆ ನಗರ ಪ್ರಮುಖ ಸ್ಥಳವಾಗಿದೆ. 

ಸಾರ್ವಜನಿಕ ವಾಯು ವಿಹಾರಕ್ಕೆ ಅನುಕೂಲಕರವಾಗುವಂತೆ ಅಭಿವೃದ್ಧಿ ಮಾಡಬೇಕಿದ್ದು, ಅಭಿವೃದ್ಧಿ ಪಡಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ

ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ: ಭಾರಿ ಪ್ರಮಾಣದ ಹಾನಿ ಶಂಕೆ| video