ಹಲಸೂರು ಕೆರೆ ಸ್ವಚ್ಛಗೊಳಿಸುತ್ತಿರುವ ಸಿಬ್ಬಂದಿಗಳು 
ರಾಜ್ಯ

ಹಲಸೂರು ಕೆರೆ ಸ್ವಚ್ಛತೆಗೆ ಕೈಜೋಡಿಸಿದ ಎಂಇಜಿ, ಬಿಬಿಎಂಪಿ ಸಿಬ್ಬಂದಿ

ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ಹಾಗೂ ಬಿಬಿಎಂಪಿ ಕೆರೆ ನಿರ್ವಹಣಾ ಸಿಬ್ಬಂದಿ ಜಂಟಿಯಾಗಿ ಹಲಸೂರು ಕೆರೆ ಸ್ವಚ್ಛತಾ ಕಾರ್ಯ ಭರದಿಂದ ನಡೆಯುತ್ತಿದೆ. 

ಬೆಂಗಳೂರು: ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ಹಾಗೂ ಬಿಬಿಎಂಪಿ ಕೆರೆ ನಿರ್ವಹಣಾ ಸಿಬ್ಬಂದಿ ಜಂಟಿಯಾಗಿ ಹಲಸೂರು ಕೆರೆ ಸ್ವಚ್ಛತಾ ಕಾರ್ಯ ಭರದಿಂದ ನಡೆಯುತ್ತಿದೆ. 

ಒಟ್ಟು 113 ಎಕರೆ ಇರುವ ಹಲಸೂರು ಕೆರೆಯನ್ನು ಕಳೆದ ಒಂದು ವಾರದಿಂದ ಬಿಬಿಎಂಪಿ ಕೆರೆಗಳ ನಿರ್ವಹಣಾ ಸಿಬ್ಬಂದಿ ಹಾಗೂ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಸಿಬ್ಬಂದಿ ಜಂಟಿಯಾಗಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ಶನಿವಾರ ಬಿಬಿಎಂಪಿಯ 80 ಮಂದಿ ಸಿಬ್ಬಂದಿ ಹಾಗೂ ಎಂಇಜಿಯ 150 ಸಿಬ್ಬಂದಿ ಐದು ಬೋಟ್ ಬಳಸಿ ಕಳೆಯನ್ನು ತೆರವುಗೊಳಿಸಿದರು. 

ಶನಿವಾರ ಹಲಸೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಕೆರೆ ಸ್ವಚ್ಛತಾ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿ ಎಂಇಜಿ ತರಬೇತಿ ಸ್ಥಳವಾದ ಹಲಸೂರು ಕೆರೆ ನಗರ ಪ್ರಮುಖ ಸ್ಥಳವಾಗಿದೆ. 

ಸಾರ್ವಜನಿಕ ವಾಯು ವಿಹಾರಕ್ಕೆ ಅನುಕೂಲಕರವಾಗುವಂತೆ ಅಭಿವೃದ್ಧಿ ಮಾಡಬೇಕಿದ್ದು, ಅಭಿವೃದ್ಧಿ ಪಡಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT