ಬೊಮಾನ್ ಇರಾನಿ 
ರಾಜ್ಯ

ಬೆಂಗಳೂರು: ನಟ ಬೊಮಾನ್ ಇರಾನಿ ಸಹೋದರಿ ಮನೆಯಲ್ಲಿ ಕಳ್ಳತನ, ಇಬ್ಬರ ಬಂಧನ

ಬಾಲಿವುಡ್‌ ನಟ ಬೊಮಾನ್‌ ಇರಾನಿ ಸೋದರ ಸಂಬಂಧಿ ಮನೆಯಲ್ಲಿ ಕೋಟ್ಯಂತರ ರುಪಾಯಿ ಮೌಲ್ಯದ ಚಿನ್ನದ ಬಿಸ್ಕೆಟ್‌ ಹಾಗೂ ವಿದೇಶಿ ಕರೆನ್ಸಿ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಮನೆ ಕೆಲಸದಾಕೆ ಹಾಗೂ ಆಕೆಯ ಪುತ್ರನನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬಾಲಿವುಡ್‌ ನಟ ಬೊಮಾನ್‌ ಇರಾನಿ ಸೋದರ ಸಂಬಂಧಿ ಮನೆಯಲ್ಲಿ ಕೋಟ್ಯಂತರ ರುಪಾಯಿ ಮೌಲ್ಯದ ಚಿನ್ನದ ಬಿಸ್ಕೆಟ್‌ ಹಾಗೂ ವಿದೇಶಿ ಕರೆನ್ಸಿ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಮನೆ ಕೆಲಸದಾಕೆ ಹಾಗೂ ಆಕೆಯ ಪುತ್ರನನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಜಿ.ಹಳ್ಳಿ ನಿವಾಸಿಗಳಾದ ಮೇರಿ ಅಲಿಸ್‌ ಹಾಗೂ ಈಕೆಯ ಮೈಕೆಲ್‌ ವಿನ್ಸೆಂಟ್‌ ಬಂಧಿತರು. ಅಬ್ಬಾಸ್‌ ಅಲಿ ರಸ್ತೆಯಲ್ಲಿರುವ ಎಂಬೆಸ್ಸಿ ಕ್ರೌನ್‌ ಅಪಾರ್ಟ್‌ಮೆಂಟ್‌ ನಿವಾಸಿಯೂ ಆದ ಬಾಲಿವುಡ್‌ ನಟ ಬೊಮನ್‌ ಇರಾನಿ ಸೋದರ ಸಂಬಂಧಿ ಖುರ್ಷೀದ್‌ ಇರಾನಿ ಅವರು ಕೊಟ್ಟ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಖುರ್ಷೀದ್‌ ಇರಾನಿ ಅವರು ಅವರ ಕುಟುಂಬ ಅಬ್ಬಾಸ್‌ ಅಲಿ ರಸ್ತೆಯಲ್ಲಿರುವ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ ಕುಟುಂಬ ಸಮೇತ ನೆಲೆಸಿದೆ. ಕಳೆದ 28 ವರ್ಷಗಳಿಂದ ಬಂಧಿತೆ ಮೇರಿ ಖುರ್ಷಿದ್‌ ಅವರ ಮನೆ ಕೆಲಸ ಮಾಡಿಕೊಂಡಿದ್ದಳು. ಹಲವು ವರ್ಷಗಳಿಂದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೇರಿ ಮನೆಯವರು ನಂಬಿಕೆಗಳಿಸಿದ್ದ ಕಾರಣ, ಆಕೆ ಮನೆಯಲ್ಲಿ ಓಡಾಟಕ್ಕೆ ಮುಕ್ತ ಅವಕಾಶ ನೀಡಲಾಗಿತ್ತು.

ಖುರ್ಷೀದ್‌ ಅವರು ಮನೆಯ ಲಾಕರ್‌ನಲ್ಲಿ 100 ಗ್ರಾಂ ತೂಕದ ಒಂಬತ್ತು ಚಿನ್ನದ ಬಿಸ್ಕೆಟ್‌, .85 ಲಕ್ಷ ನಗದು ಹಾಗೂ 11 ಲಕ್ಷ ಮೌಲ್ಯದ 15 ಸಾವಿರ ಯುಎಸ್‌ ಕರೆನ್ಸಿಗಳನ್ನು ಇಟ್ಟಿದ್ದರು. ನ.29ರಂದು ಲಾಕರ್‌ ನೋಡಿದಾಗ ಚಿನ್ನದ ಬಿಸ್ಕೆಟ್‌, ನಗದು ಹಾಗೂ ವಿದೇಶಿ ಕರೆನ್ಸಿ ಕಳವು ಆಗಿರುವುದು ಬೆಳಕಿಗೆ ಬಂದಿದೆ. ಖುರ್ಷೀದ್‌ ಅವರು ಮನೆ ಕೆಲಸ ಮಾಡುತ್ತಿದ್ದ ಮೇರಿ ಮೇಲೆ ನೇರವಾಗಿ ಆರೋಪ ಹೊರಿಸಿ ಹಲಸೂರು ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೈಯಪ್ಪನಹಳ್ಳಿ ಠಾಣೆ ಇನ್‌ಸ್ಪೆಕ್ಟರ್‌ ವೆಂಕಟಾಚಲಪತಿ ನೇತೃತ್ವದ ತಂಡ ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವು ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಳು. ಈಕೆ ಕೊಟ್ಟಮಾಹಿತಿ ಮೇರೆಗೆ ಆಕೆಯ ಪುತ್ರನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT