ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರೈಲಿನ ಹಳಿ ಮೇಲೆ ಸಾಯಲು ಹೊರಟಿದ್ದ ಉಪನ್ಯಾಸಕಿ, ವಿದ್ಯಾರ್ಥಿಯನ್ನು ರಕ್ಷಿಸಿದ ಪೊಲೀಸರು

ಎರಡು ಪ್ರತ್ಯೇಕ ಘಟನೆಗಳಲ್ಲಿ ರೈಲು ಹಳಿಗಳ ಮೇಲೆ ಸಾಯಲು ಹೊರಟಿದ್ದ ಇಬ್ಬರನ್ನು ರೈಲ್ವೆ ಸಂರಕ್ಷಣಾ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಎರಡು ಪ್ರತ್ಯೇಕ ಘಟನೆಗಳಲ್ಲಿ ರೈಲು ಹಳಿಗಳ ಮೇಲೆ ಸಾಯಲು ಹೊರಟಿದ್ದ ಇಬ್ಬರನ್ನು ರೈಲ್ವೆ ಸಂರಕ್ಷಣಾ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಹಿಳಾ ಉಪನ್ಯಾಸಕಿ ಮತ್ತು ವಿದ್ಯಾರ್ಥಿ ರೈಲು ಹಳಿಗೆ ಸಿಲುಕಿ ಸಾಯಲು ಹೊರಟಿದ್ದರು, ಆದರೆ ಸಿಬ್ಬಂದಿ ಈ ಸಂಬಂಧ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ರಕ್ಷಿಸಲಾಯಿತು ಎಂದು ರೈಲ್ವೆ ಸಂರಕ್ಷಣಾ ಪಡೆಯ ಹಿರಿಯ ರಕ್ಷಣಾ ಆಯುಕ್ತ ದೇಬಶ್ಮಿತಾ ಚಟ್ಟೋಪಾದ್ಯಾಯ ತಿಳಿಸಿದ್ದಾರೆ.

ಮೊದಲ ಘಟನೆಯಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ 2.30ರ ವೇಳೆಗೆ ಪ್ಲಾಟ್ ಫಾರಂ ನಲ್ಲಿ ರೈಲು ಹತ್ತುವ ವೇಳೆ ಕಾಲು ಜಾರಿ ಹಳಿ ಮೇಲೆ ಬಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಮುಖ್ಯ ಪೇದೆ ಎಸ್ ಎಂ ಜಾಲಿಹಾಳ್ ಅವರು, ಮೇರಿ ಸಹೇಲಿ ತಂಡದ ನೆರವಿನೊಡನೆ ರೈಲು ಹಳಿ ಮೇಲೆ ಬಿದ್ದಿದ್ದ ವಿದ್ಯಾರ್ಥಿ ಜೀವವನ್ನು ಅಪಾಯದಿಂದ ರಕ್ಷಿಸಿದ್ದಾರೆ. ಈತ ಹುಬ್ಬಳ್ಳಿ ಮೂಲದ ವಿದ್ಯಾರ್ಥಿಯಾಗಿದ್ದಾನೆ.

ಮತ್ತೊಂದು ಪ್ರಕರಣದಲ್ಲಿ ಮಹಿಳೆಯೊಬ್ಬರು ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದರು, ಇದನ್ನು ನೋಡಿದ ಆರ್ ಪಿಎಫ್ ಸಿಬ್ಬಂದಿ ಆಕೆಯನ್ನು ಹಳಿಯಿಂದ ದೂರ ಸರಿಯುವಂತೆ ಕೂಗಿಕೊಂಡಿದ್ದಾರೆ. ಆದರೆ ಆಕೆ ಕೇಳಿಯೂ ಕೇಳದಂತೆ ಇದ್ದುದ್ದನ್ನು ನೋಡಿದ ಪೊಲೀಸರು ಹಳಿ ಮೇಲೆ ಜಿಗಿದು, ಆಕೆಯನ್ನು ರಕ್ಷಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

29 ವರ್ಷದ ಮಹಿಳೆ ನಗರದ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದು, ವೈಯಕ್ತಿಕ ಸಮಸ್ಯೆ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದರು, ಹೀಗಾಗಿ ಸಾಯಲು ಹೊರಟಿದ್ದರು, ನಂತರ ಆಕೆಗೆ ಕೌನ್ಸೆಲಿಂಗ್ ಮಾಡಿ ಮನೆಗೆ ಕಳುಹಿಸಲಾಗಿದೆ. ಆಕೆಯನ್ನು ಮನೆಗೆ ಕರೆದು ಕೊಂಡು ಹೋಗಲು ಬಂದ ಆಕೆಯ ತಂದೆ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT