ರಾಜ್ಯ

ವೈಕುಂಠ ಏಕಾದಶಿ: ಭಕ್ತರಿಗೆ ಕೋಟೆ ವೆಂಕಟರಮಣನ ದರ್ಶನ ಇಲ್ಲ

Srinivasamurthy VN

ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಇದೇ 25 ರಂದು ವೈಕುಂಠ ಏಕಾದಶಿ ದಿನದಂದು ಬೆಂಗಳೂರು ನಗರ ಕೋಟೆ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಪ್ರವೇಶ ನಿಷೇಧಿಸಲಾಗಿದೆ.

ಭಕ್ತಾದಿಗಳಿಗೆ ದೇವರ ದರ್ಶನ ಹಾಗೂ ವೈಕುಂಠ ದ್ವಾರ ಪ್ರವೇಶ ಇರುವುದಿಲ್ಲ ಎಂದು ಹಿಂದೂ ಧಾರ್ಮಿಕ ಇಲಾಖೆಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರ ಆದೇಶದಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ. 
 

SCROLL FOR NEXT