ಬೆಳಗಾವಿ ವಿಮಾನ ನಿಲ್ದಾಣದಲ್ಲಿರುವ ವಾಯು ಸಂಚಾರ ದಟ್ಟಣೆ ನಿಯಂತ್ರಣ ಕೇಂದ್ರ 
ರಾಜ್ಯ

ಉತ್ತರ ಕರ್ನಾಟಕಕ್ಕೆ ಮತ್ತೊಂದು ಹೆಮ್ಮೆ: ಶೀಘ್ರದಲ್ಲಿಯೇ ವೈಮಾನಿಕ ತರಬೇತಿ ಶಾಲೆ ಸ್ಥಾಪನೆ

ಪೈಲಟ್ ಗಳ ಕೊರತೆಯನ್ನು ನೀಗಿಸಲು 6 ವಿಮಾನ ತರಬೇತಿ ಸಂಸ್ಥೆಗಳನ್ನು ದೇಶಾದ್ಯಂತ ಸ್ಥಾಪಿಸುತ್ತಿದ್ದು, ಅವುಗಳಲ್ಲಿ ಎರಡು ಉತ್ತರ ಕರ್ನಾಟಕದಳಲ್ಲಿ ತಲೆಯೆತ್ತಲಿವೆ. 

ಬೆಂಗಳೂರು: ಪೈಲಟ್ ಗಳ ಕೊರತೆಯನ್ನು ನೀಗಿಸಲು 6 ವಿಮಾನ ತರಬೇತಿ ಸಂಸ್ಥೆಗಳನ್ನು ದೇಶಾದ್ಯಂತ ಸ್ಥಾಪಿಸುತ್ತಿದ್ದು, ಅವುಗಳಲ್ಲಿ ಎರಡು ಉತ್ತರ ಕರ್ನಾಟಕದಳಲ್ಲಿ ತಲೆಯೆತ್ತಲಿವೆ. 

ಬೆಳಗಾವಿ ಮತ್ತು ಕಲಬುರಗಿಯಲ್ಲಿ ವಿಮಾನ ಹಾರಾಟ ತರಬೇತಿ ಶಾಲೆ ಆರಂಭವಾಗಲಿದ್ದು ಇದಕ್ಕೆ ಬಿಡ್ಡಿಂಗ್ ಪ್ರಕ್ರಿಯೆ ನಡೆಯುತ್ತಿದೆ. ಈ ಎರಡೂ ನಗರಗಳಲ್ಲಿನ ವಿಮಾನ ನಿಲ್ದಾಣಗಳು ಉಡಾನ್ ಯೋಜನೆಯಡಿ ಬರುತ್ತದೆ.

ಏರ್ ಚೀಫ್ ಮಾರ್ಷಲ್ (ನಿವೃತ್ತ) ಫಾಲಿ ಹೆಚ್ ಮೇಜರ್ ನೇತೃತ್ವದ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಎಫ್‌ಟಿಒಗಳನ್ನು ಸ್ಥಾಪಿಸುವ ನೀತಿಯನ್ನು ಘೋಷಿಸಲಾಯಿತು, ಇದು ವಾಯುಯಾನ ಕ್ಷೇತ್ರದಲ್ಲಿ ಪೈಲಟ್‌ಗಳ ಬೇಡಿಕೆಯ ಬಗ್ಗೆ ತಿಳಿಸುತ್ತದೆ. ಮುಂದಿನ ಐದು ವರ್ಷಗಳಲ್ಲಿ ಸುಮಾರು 9,400 ಪೈಲಟ್‌ಗಳ ಅಗತ್ಯವಿರುತ್ತದೆ ಮತ್ತು ಪ್ರಸ್ತುತ, ಶೇಕಡಾ 30ರಷ್ಟು ಮಹತ್ವಾಕಾಂಕ್ಷಿ ಪೈಲಟ್‌ಗಳು ತರಬೇತಿ ಪಡೆಯಲು ವಿದೇಶಗಳಿಗೆ ಹೋಗುತ್ತಾರೆ, ಅಧಿಕ ಖರ್ಚುವೆಚ್ಚವಾಗುತ್ತದೆ, ಇದನ್ನು ತಪ್ಪಿಸಲು ಇಲ್ಲಿಯೇ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ತಿಳಿಸಿದರು.

ನಮ್ಮ ವಿಮಾನ ನಿಲ್ದಾಣದಲ್ಲಿ ನಾವು ಪ್ರಸ್ತಾಪಿಸಿರುವ ಎಫ್‌ಟಿಒ ರನ್ ವೇ ಅಡಿಯಲ್ಲಿ 10 ಮೀಟರ್ ಕೆಳಗೆ ಬರುತ್ತದೆ. ಅದಕ್ಕಾಗಿ ನಾವು ನಮ್ಮ ಭೂಮಿಯನ್ನು ಗುತ್ತಿಗೆಗೆ ನೀಡುತ್ತೇವೆ ಎಂದರು.

ಇತ್ತೀಚೆಗೆ ನಡೆದ ಪೂರ್ವ ಬಿಡ್ ಸಭೆಯಲ್ಲಿ ಐದು ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿದ್ದವು. ಬಿಡ್ಡಿಂಗ್ ಪ್ರಕ್ರಿಯೆಯು ನಡೆಯುತ್ತಿದೆ ಮತ್ತು ಬಿಡ್ ನೀಡಲು ಡಿಸೆಂಬರ್ 22 ಕೊನೆಯ ದಿನಾಂಕವಾಗಿದೆ. ಒಪ್ಪಂದವು ಅಂತಿಮಗೊಂಡ ನಂತರ ಶಾಲೆಯು ಅಸ್ತಿತ್ವಕ್ಕೆ ಬರಲು ಒಂದೂವರೆಯಿಂದ  2 ವರ್ಷಗಳು ಬೇಕಾಗಬಹುದು. 

ಉತ್ತರ ಕರ್ನಾಟಕದಲ್ಲಿ ಯಾವುದೇ ಪ್ರಮುಖ ವೈಮಾನಿಕ ಶಾಲೆಗಳಿಲ್ಲ.ಈ ಪ್ರದೇಶದಲ್ಲಿ ಪೈಲಟ್‌ಗಳಾಗಲು ಬಯಸುವವರಿಗೆ ಇದು ಸಹಾಯ ಮಾಡುತ್ತದೆ ಎಂದು ಮೌರ್ಯ ಹೇಳಿದರು. ಎಎಐ ನೀತಿಯ ಪ್ರಕಾರ, ಎಫ್‌ಟಿಒಗಳನ್ನು 25 ವರ್ಷಗಳ ಗುತ್ತಿಗೆ ಅವಧಿಯಲ್ಲಿ ಬಿಡ್ ದಾರರಿಗೆ ನೀಡಲಾಗುವುದು ಮತ್ತು ಒಪ್ಪಂದದ ಅವಧಿ ಮುಗಿದ ನಂತರ ಶೂನ್ಯ ವೆಚ್ಚದಲ್ಲಿ ಎಎಐಗೆ ಹಿಂತಿರುಗಿಸಲಾಗುತ್ತದೆ. ಈ ಪ್ರತಿಯೊಂದು ವಿಮಾನ ನಿಲ್ದಾಣಗಳಲ್ಲಿ ಗರಿಷ್ಠ ಎರಡು ಎಫ್‌ಟಿಒಗಳನ್ನು ಅನುಮತಿಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT