ಐಫೋನ್ ತಯಾರಿಕಾ ಘಟಕ 
ರಾಜ್ಯ

ವಿಸ್ಟ್ರಾನ್ ಐಫೋನ್ ತಯಾರಿಕಾ ಘಟಕದ ಮೇಲೆ ದಾಳಿ ಪ್ರಕರಣ: 128 ಮಂದಿ ಬಂಧನ

ಕೋಲಾರದ ಐಫೋನ್ ತಯಾರಿಕಾ ಘಟಕದ ಮೇಲೆ ನಡೆದಿದ್ದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 128 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ,

ಕೋಲಾರ: ಕೋಲಾರದ ಐಫೋನ್ ತಯಾರಿಕಾ ಘಟಕದ ಮೇಲೆ ನಡೆದಿದ್ದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 128 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ,

ಕೋಲಾರದ ನರಸಪುರದಲ್ಲಿ ಶನಿವಾರ ವಿಸ್ಟ್ರಾನ್ ಕಾರ್ಪೊರೇಶನ್ ಎಂಬ ಐಪೋನ್ ತಯಾರಿಕಾ ಸಂಸ್ಥೆಯ ಮೇಲೆ ಪ್ರತಿಭಟನಾ ನಿರತರು ದಾಳಿ ನಡೆಸಿದ್ದರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 128 ಮಂದಿ  ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಕೋಲಾರ ಎಸ್ ಪಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 4 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಮೂರು ಪ್ರಕರಣಗಳನ್ನು ವಿಸ್ಟ್ರಾನ್ ಕಾರ್ಪೊರೇಶನ್ ಸಂಸ್ಥೆ ದಾಖಲಿಸಿದ್ದು, ಒಂದು ಪ್ರಕರಣವನ್ನು ಪೊಲೀಸರು ತಮ್ಮ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರಿಂದ ದಾಖಲಿಸಿದ್ದಾರೆ. ದಾಳಿ ಸಂಬಂಧದ ವಿಡಿಯೋಗಳನ್ನು ಆಧರಿಸಿ  ಈ ಬಂಧನ ಪ್ರಕ್ರಿಯೆ ನಡೆಸಲಾಗಿದೆ. ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೇ ವಿಡಿಯೋಗಳನ್ನು ಆಧರಿಸಿ ನಾವು ಕಾರ್ಯಾಚರಣೆ ನಡೆಸಿದ್ದೆವು ಎಂದು ಎಸ್ ಪಿ ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 300ಕ್ಕೂ ಹೆಚ್ಚು ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆಯಲಾಗಿತ್ತು. ಈ ಪೈಕಿ 128 ಕಾರ್ಮಿಕರನ್ನು ಭಾನುವಾರ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಪರೆನ್ಸ್‌ ಮೂಲಕ ಹಾಜರು ಪಡಿಸಲಾಯಿತು. ಕೋಲಾರದ ಎಸ್ಪಿ ಕಚೇರಿ  ಹಿಂಭಾಗದ ಕೊಠಡಿಯಲ್ಲಿ ವಿಡಿಯೋ ಕಾನ್ಫರೆನ್ಸ್‌ ನಡೆಸಲಾಯಿತು. 5 ಖಾಸಗಿ ಬಸ್‌ಗಳಲ್ಲಿ 128ಕ್ಕೂ ಹೆಚ್ಚು ಆರೋಪಿಗಳನ್ನು ಕೆಜಿಎಫ್‌, ಚಿಂತಾಮಣಿ ಮತ್ತು ಚಿತ್ರದುರ್ಗ ಜೈಲಿಗೆ ಸಾಗಿಸಲಾಯಿತು.

ಇನ್ನು ದಾಳಿ ನಡೆದ ವಿಸ್ಟ್ರಾನ್ ಕಾರ್ಪೊರೇಶನ್ ಸಂಸ್ಥೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ (ಕಾನೂನು ಮತ್ತು ಸುವ್ಯವಸ್ಥೆ) ಪ್ರತಾಪ್ ರೆಡ್ಡಿ ಮತ್ತು ಕೇಂದ್ರೀಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸೆಮಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. 

ಸಂಸ್ಥೆಯ ಸಿಬ್ಬಂದಿಗಳ ವಿಚಾರಣೆ
ಇನ್ನು ಉತ್ಪಾದನಾ ಘಟಕದ ಬಳಿ ಎರಡು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ತಂಡಗಳು, ಕೆಎಸ್‌ಆರ್‌ಪಿ ತಂಡ ಮತ್ತು ಸಿವಿಲ್ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ದಾಳಿಯ ಹಿಂದೆ ಯಾವುದೇ ಸಂಸ್ಥೆ ಇದೆಯೇ ಎಂದು ಪರಿಶೀಲಿಸಲು ಪೊಲೀಸ್ ತಂಡಗಳು ಕಂಪನಿಯ  ಪ್ರತಿನಿಧಿಗಳು ಮತ್ತು ನೌಕರರನ್ನು ವಿಚಾರಣೆ ನಡೆಸುತ್ತಿದೆ ಎಂದು ಸೇಮಂತ್ ಕುಮಾರ್ ಸಿಂಗ್ ಹೇಳಿದರು. ಅಂತೆಯೇ ದಾಳಿಯಿಂದಾಗಿ ಸಂಸ್ಥೆ ಹಾನಿಗೀಡಾಗಿದ್ದು, ದುರಸ್ತಿ ಕಾರ್ಯ ನಡೆಸಿದ ಬಳಿಕ ಒಂದು ವಾರದಲ್ಲಿ ಕಂಪನಿಯು ಪುನರಾರಂಭಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT