ಶರತ್ - ರೋಹಿಣಿ ಸಿಂಧೂರಿ 
ರಾಜ್ಯ

ಮೈಸೂರು ಜಿಲ್ಲಾಧಿಕಾರಿಯಾಗಿ ಬಿ.ಶರತ್ ರನ್ನು ಮರುನೇಮಿಸಿ: ಸಿಎಟಿ; ರೋಹಿಣಿ ಸಿಂಧೂರಿಗೆ ಹಿನ್ನಡೆ

ಮೈಸೂರು ಜಿಲ್ಲಾಧಿಕಾರಿಯಾಗಿ ಬಿ. ಶರತ್ ಅವರನ್ನು ಮರುನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ(ಸಿಎಟಿ) ಆದೇಶ ನೀಡಿದೆ.

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿಯಾಗಿ ಬಿ. ಶರತ್ ಅವರನ್ನು ಮರುನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ(ಸಿಎಟಿ) ಆದೇಶ ನೀಡಿದೆ. ಇದರಿಂದ ಹಾಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ಈ ಸಂಬಂಧ ಡಿ. 22ರೊಳಗೆ ಆದೇಶ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಅಡ್ವೊಕೇಟ್ ಜನರಲ್‌ಗೆ ನ್ಯಾಯಾಧಿಕರಣ ನಿರ್ದೇಶಿಸಿದೆ.

ಈ ಆದೇಶ ಪಾಲಿಸಲು ಸರ್ಕಾರ ವಿಫಲವಾದಲ್ಲಿ ಡಿ. 22 ರಂದು ಸಿಎಟಿ ಈ ಬಗ್ಗೆ ಆದೇಶ ಹೊರಡಿಸಲಿದೆ ಎಂದು ಹೇಳಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದ ಶರತ್ ಬಿ. ಅವರನ್ನು ಸರ್ಕಾರ ಏಕಾಏಕಿ ವರ್ಗಾವಣೆ ಮಾಡಿತ್ತು. ರೋಹಿಣಿ ಸಿಂಧೂರಿ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು. ಇದನ್ನು ಶರತ್ ಸಿಎಟಿಯಲ್ಲಿ ಪ್ರಶ್ನೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ಥಗಿತ; ಈ ನಿಷ್ಕ್ರಿಯೆಗೆ PM ಮೋದಿ, ಅಮಿತ್ ಶಾ ಕಾರಣ: ಖರ್ಗೆ

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!