ಚುನಾವಣಾ ಆಯೋಗ 
ರಾಜ್ಯ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೀತಿ ಸಂಹಿತೆ ಪಾಲನೆಗೆ ಆದ್ಯತೆ ನೀಡಿ: ಚುನಾವಣಾ ಆಯೋಗ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ಸ್ಪರ್ಧಾಳುಗಳು ಮಾದರಿ ನೀತಿ ಸಂಹಿತೆ ಹಾಗೂ ಕಾನೂನು ಉಲ್ಲಂಘನೆಯಾಗದಂತೆ ಅಗತ್ಯ ಕ್ರಮವಹಿಸಬೇಕೆಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಹೊನ್ನಾಂಬ ತಿಳಿಸಿದ್ದಾರೆ.

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ಸ್ಪರ್ಧಾಳುಗಳು ಮಾದರಿ ನೀತಿ ಸಂಹಿತೆ ಹಾಗೂ ಕಾನೂನು ಉಲ್ಲಂಘನೆಯಾಗದಂತೆ ಅಗತ್ಯ ಕ್ರಮವಹಿಸಬೇಕೆಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಹೊನ್ನಾಂಬ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಗ್ರಾಮ ಪಂಚಾಯ್ತಿ ಚುನಾವಣೆಗಳು ಪಕ್ಷ ರಹಿತ ಚುನಾವಣೆಯಾಗಿದ್ದು, ರಾಜಕೀಯ ಪಕ್ಷಗಳು ಈ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ, ಸಭೆ-ಸಮಾರಂಭಗಳನ್ನು ನಡೆಸುವ ರಾಜಕೀಯ ಮುಖಂಡರುಗಳ ಭಾವಚಿತ್ರಗಳನ್ನು ಕರಪತ್ರಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ ಮತ್ತು ಚಿಹ್ನೆಯನ್ನು ಬಳಸಿಕೊಂಡು ಪ್ರಚಾರ ಮಾಡದಿರುವಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ರಾಜಕೀಯ ಪಕ್ಷಗಳು ಸಭೆ-ಸಮಾರಂಭಗಳನ್ನು ಏರ್ಪಡಿಸಿ ವೇದಿಕೆ ಮೇಲೆ ಪಕ್ಷದ ಬಾವುಟ, ಬ್ಯಾನರ್‌ಗಳನ್ನು ಬಳಸಲು ಅನುಮತಿ ಇರುವುದಿಲ್ಲ. ಸ್ಪರ್ಧಾಳುಗಳನ್ನು ತಮ್ಮ ಪಕ್ಷದ ಅಥವಾ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತಯಾಚನೆ ಮಾಡುವುದಕ್ಕೆ ಅನುಮತಿ ಇರುವುದಿಲ್ಲ.

ಚುನಾವಣೆಗೆ ಸ್ಪರ್ಧಿಸಿದ ಸ್ಪರ್ಧಾಳುಗಳು ರಾಜಕೀಯ ಮುಖಂಡರ ಭಾವಚಿತ್ರ ಅಥವಾ ಪಕ್ಷದ ಚಿಹ್ನೆಯಿರುವ ಕರಪತ್ರ, ಕಟೌಟ್, ಬ್ಯಾನರ್ ಮತ್ತು ಬಂಟಿಂಗ್‌ಗಳು, ಟಿ.ವಿ.ಮಾಧ್ಯಮಗಳು ಹಾಗೂ ಪತ್ರಿಕೆಗಳ ಮೂಲಕ ಪ್ರಚಾರ ಮಾಡುವಂತಿಲ್ಲ.

ಇವುಗಳಲ್ಲಿ ಯಾವುದೇ ಪ್ರಕರಣಗಳು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಅಂತಹ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅಂತಹವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT