ಸಾಂದರ್ಭಿಕ ಚಿತ್ರ 
ರಾಜ್ಯ

ಗ್ರಾ.ಪಂ.ಚುನಾವಣೆ: ಒತ್ತಡಕ್ಕೆ ಮಣಿದು ನಾಮಪತ್ರ ಹಿಂಪಡೆದರೆ ಕ್ರಮ- ಆಯೋಗ ಎಚ್ಚರಿಕೆ 

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರಗಳನ್ನು ಸ್ವಯಂ ಪ್ರೇರಣೆಯಿಂದ ಹಿಂಪಡೆಬೇಕು. ಒತ್ತಡಕ್ಕೆ ಮಣಿದು ಹಿಂದೆ ಪಡೆದಿದ್ದರೆ ಅಂತಹ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.

ಬೆಂಗಳೂರು: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರಗಳನ್ನು ಸ್ವಯಂ ಪ್ರೇರಣೆಯಿಂದ ಹಿಂಪಡೆಬೇಕು. ಒತ್ತಡಕ್ಕೆ ಮಣಿದು ಹಿಂದೆ ಪಡೆದಿದ್ದರೆ ಅಂತಹ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಂಚಾಯತ್ ಸದಸ್ಯತ್ವವನ್ನು ಹರಾಜು ಹಾಕುತ್ತಿರುವ ಪ್ರಕರಣಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ,  ಸ್ವರ್ಧಿಸುವ  ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯುತ್ತಿದ್ದಲ್ಲಿ ಅವರು ಯಾವುದೇ ಒತ್ತಡ, ಅಮೀಷಗಳಿಗೆ ಒಳಗಾಗದೆ ನ್ಯಾಯಯುತವಾಗಿ ಹಾಗೂ ಕ್ರಮವಾಗಿ ಹಿಂಪಡೆಯುತ್ತಿರುವವರೇ ಎಂಬ ಬಗ್ಗೆ ಖಾತ್ರಿಪಡಿಸಿಕೊಳ್ಳುವಂತೆ ಸೂಚಿಸಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆ ನಡೆಸುವ) ನಿಯಮಗಳು ರೀತಿಯಲ್ಲಿ ಉಮೇದುವಾರಿಕೆಯನ್ನು ಅಭ್ಯರ್ಥಿಯು ಖುದ್ದಾಗಿ ಅಥವಾ ಅವನ ಸೂಚಕನ ಮೂಲಕವಾಗಲೀ, ಅಥವಾ  ಅಂಥ ಅಭ್ಯರ್ಥಿಯಿಂದ ಇದಕ್ಕಾಗಿ ಅಧಿಕೃತಗೊಳಿಸಲಾದ ಏಜೆಂಟ್ ಮೂಲಕವಾಗಲೀ ಹಿಂತೆಗೆದುಕೊಳ್ಳಲು ಅವಕಾಶವಿರುತ್ತದೆ.  

ಈ ಸಂದರ್ಭದಲ್ಲಿ ಹಿಂತೆಗೆದುಕೊಳ್ಳುವ ನೋಟಿಸನ್ನು ಅಭ್ಯರ್ಥಿಯು ಯಾವುದೇ ಒತ್ತಡವಿಲ್ಲದೇ ಸ್ವಇಚ್ಛೆಯಿಂದ ನೀಡುತ್ತಿರುವ ಹಾಗೂ ನೈಜತೆಯ ಬಗ್ಗೆ ತೃಪ್ತಿಯಾದ ಮೇಲೆ ಅಂಗೀಕರಿಸುವಂತೆ ಚುನಾವಣಾಧಿಕಾರಿಗಳಿಗೆ ಸೂಕ್ತ ಸೂಚನೆಯನ್ನು ನೀಡುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT