ಘಟನಾ ಸ್ಥಳದಲ್ಲಿ ಜನರು 
ರಾಜ್ಯ

ವಿಸ್ಟ್ರಾನ್ ಘಟಕ ಧ್ವಂಸ ಪ್ರಕರಣ: ಸ್ಥಳದ ಅಭಾವ ಕಾರಣ ಬಂಧಿತರನ್ನು ಪ್ರತ್ಯೇಕ ಕಾರಾಗೃಹಗಳಿಗೆ ರವಾನೆ

ನರಸಾಪುರದ ಸಮೀಪದ ವಿಸ್ಟ್ರಾನ್ ಘಟಕದ ಮೇಲೆ ನಡೆದ ದಾಳಿಯ ಕೃತ್ಯದಲ್ಲಿ ಪೊಲೀಸರು 149 ಮಂದಿಯನ್ನು ಬಂಧನಕ್ಕೊಳಪಡಿಸಿದ್ದು, ಬಂಧಿತರನ್ನು ಪ್ರತ್ಯೇಕ ಜೈಲುಗಳಿಗೆ ರವಾನಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಕೋಲಾರ: ನರಸಾಪುರದ ಸಮೀಪದ ವಿಸ್ಟ್ರಾನ್ ಘಟಕದ ಮೇಲೆ ನಡೆದ ದಾಳಿಯ ಕೃತ್ಯದಲ್ಲಿ ಪೊಲೀಸರು 149 ಮಂದಿಯನ್ನು ಬಂಧನಕ್ಕೊಳಪಡಿಸಿದ್ದು, ಬಂಧಿತರನ್ನು ಪ್ರತ್ಯೇಕ ಜೈಲುಗಳಿಗೆ ರವಾನಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 

ಕೋಲಾರ ಜೈಲಿನಲ್ಲಿ ಸ್ಥಳದ ಕೊರತೆ ಇರುವ ಹಿನ್ನೆಲೆಯಲ್ಲಿ ಬಂಧಿತರನ್ನು ವಿವಿಧ ಜೈಲುಗಳಿಗೆ ರವಾನೆ ಮಾಡಲಾಗುತ್ತಿದೆ ಎನ್ನಲಾಗಿದೆ. 

ಚಿತ್ರದುರ್ಗ, ಚಿಂತಾಮಣಿ ಮತ್ತು ಕೆಜಿಎಫ್ ಜೈಲುಗಳಿಗೆ ಆರೋಪಿಗಳನ್ನು ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಬೆಂಗಳೂರು ಕಾರಾಗೃಹದ ಹಿರಿಯ ಅಧಿಕಾರಿಗಳು ಕೋಲಾರ ಜೈಲು  ಅಧಿಕಾರಿಗಳಿಗೆ ನೀಡಿರುವ ಸೂಚನೆಗಳ ಮೇರೆಗೆ ಆರೋಪಿಗಳನ್ನು ವಿವಿಧ ಕಾರಾಗೃಹಗಳಿಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿಯವರು ಪ್ರತಿಕ್ರಿಯೆ ನೀಡಿ, ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ಕೃತ್ಯಗಳಿಗೆ ಸಂಬಂಧಿಸಿದಂತೆ ಈಗಾಗಲೇ 149 ಮಂದಿಯನ್ನು ಬಂಧಿಸಲಾಗಿದೆ. ಸಿಸಿಟಿವಿ ಮತ್ತು ವಾಟ್ಸಪ್'ಗಳಲ್ಲಿ ಹಿಂಸಾಚಾರದಲ್ಲಿ ತೊಡಗಿದವರನ್ನು ಗುರುತಿಸಿ ಅವರನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಯಾವುದೇ ಸಾಕ್ಷ್ಯಾಧಾರಗಳು ಸಿಗದ 25 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಕೆಲವರ ಬಂಧನ ಆಗಬೇಕಾಗಿದೆ ಎಂದು ಹೇಳಿದ್ದಾರೆ. 

ಘಟನೆ ಸಂಬಂಧ ಈವರೆಗೂ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಸಂಸ್ಥೆಯ ಪ್ರತಿನಿಧಿಗಳು ಮೂರು ದೂರುಗಳನ್ನು ನೀಡಿದ್ದು, ಪೊಲೀಸರು ಒಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಒಂದು ಎಫ್ಐಆರ್ ನಲ್ಲಿ ಕೆಲ ದರೋಡೆಕೋರರು ಘಟನೆ ಸಂಭವಿಸಿದ ಸಂದರ್ಭದಲ್ಲಿ ಬೆಲೆಬಾಳುವ ಲ್ಯಾಪ್'ಟಾಪ್, ಮೊಬೈಲ್ ಫೋನ್ ಹಾಗೂ ಇತರೆ ಗ್ಯಾಡ್ಜೆಟ್ ಗಳನ್ನು ಹೊತ್ತಿಯ್ದಿರುವುದು ವಿಡಿಯೋಗಳಲ್ಲಿ ಕಂಡು ಬಂದಿದೆ. ಈ ಸಂಬಂಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಘಟನೆ ವೇಳೆ ಲೂಟಿ ಹಾಗೂ ದರೋಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT