ರಾಜ್ಯ

ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ನಿಧನ

Manjula VN

ಬೆಂಗಳೂರು: ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮಂಗಳವಾರ ನಿಧನರಾಗಿದ್ದಾರೆ. 

ನಗರದ ಕೋಟೆ ಪ್ರದೇಶದಲ್ಲಿ ವಾಸಿಸುತ್ತಿದ್ದ ರೇಣುಕಾ ಅವರಿಗೆ ನಿನ್ನೆ ಮಧ್ಯಾಹ್ನ ಹೃದಯಾಘಾತವಾಗಿದೆ. ಕೂಡಲೇ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕಳೆದ ರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ. 

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು, ೧೯೭೭ರಿಂದ ೧೯೮೨ರವರೆಗೆ ಅಂದಿನ ಮುಖ್ಯಮಂತ್ರಿ ಗುಂಡೂರಾವ್ ಸರ್ಕಾರದಲ್ಲಿ ರೇಷ್ಮೆ, ಕ್ರೀಡೆ ಮತ್ತು ಯುವಜನ ಸೇವೆ ಹಾಗೂ ಸಣ್ಣ ಕೈಗಾರಿಕಾ ಖಾತೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

SCROLL FOR NEXT