ಸಾಂದರ್ಭಿಕ ಚಿತ್ರ 
ರಾಜ್ಯ

ಗ್ರಾಮ ಪಂಚಾಯಿತಿ ಚುನಾವಣೆ: ಹಳ್ಳಿಗಳಲ್ಲಿ ಏರಿದೆ ಗುಂಡು, ತುಂಡಿನ ಗಮ್ಮತ್ತು!

ಗ್ರಾಮ ಪಂಚಾಯಿತಿ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು, ಮತದಾರರ ಮನಗೆಲ್ಲಲು ಸಾಕಷ್ಟು ಕಣದಲ್ಲಿರುವ ಅಭ್ಯರ್ಥಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. 

ಬೆಳಗಾವಿ: ಗ್ರಾಮ ಪಂಚಾಯಿತಿ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು, ಮತದಾರರ ಮನಗೆಲ್ಲಲು ಸಾಕಷ್ಟು ಕಣದಲ್ಲಿರುವ ಅಭ್ಯರ್ಥಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. 

ಕಾರ್ಯಕರ್ತರು, ಬೆಂಬಲಿಗರಿಗಾಗಿ ಪ್ರತೀನಿತ್ಯ ಅಭ್ಯರ್ಥಿಗಳು ತಮ್ಮ ತಮ್ಮ ಫಾರ್ಮ್ ಹೌಸ್ ಗಳಲ್ಲಿ ಗುಂಡು ಹಾಗೂ ತುಂಡುಗಳ ಪಾರ್ಟಿಗಳನ್ನು ಜೋರಾಗಿ ನಡೆಸುತ್ತಿದ್ದಾರೆ. 

ಈ ನಡುವೆ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಮದ್ಯದ ಅಭಾವ ಎದುರಾಗುವ ಸಾಧ್ಯತೆಗಳಿದ್ದು, ಹೀಗಾಗಿ ಜನರು ಮುಂಚಿತವಾಗಿಯೇ ಮದ್ಯ ಖರೀದಿ ಮಾಡಲು ಆರಂಭಿಸಿದ್ದು, ಕಳೆದ 15 ದಿನಗಳಿಂದ ಮದ್ಯ ಮಾರಾಟ ಶೇ.125ರಷ್ಟು ಏರಿಕೆಯಾಗಿದೆ ಎಂದು ಅಧಇಕಾರಿಗಳು ಮಾಹಿತಿ ನೀಡಿದ್ದಾರೆ. 

ಅಬಕಾರಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಡಿಸೆಂಬರ್ 1 ರಿಂದ 14 ರ ಅವಧಿಯ ಚುನಾವಣೆ ಘೋಷಣೆಯ ನಂತರ ಜಿಲ್ಲೆಯಲ್ಲಿ 67,542 ಮದ್ಯ ಮತ್ತು 21,560 ಬಿಯರ್ ಪೆಟ್ಟಿಗೆಗಳು ಮಾರಾಟವಾಗಿವೆ ಎಂದು ತಿಳಿದುಬಂದಿದೆ. 

ಕಳೆದ ವರ್ಷ ಇದೇ ಅವಧಿಯಲ್ಲಿ 54,106 ಬಾಕ್ಸ್ ಮದ್ಯ ಮತ್ತು 18,363 ಬಿಯರ್ ಪೆಟ್ಟಿಗೆಗಳು ಮಾರಾಟವಾಗಿದ್ದವು. 

ಇದಲ್ಲದೆ, ಮಹಾರಾಷ್ಟ್ರ ಮತ್ತು ಗೋವಾ ಗಡಿಗಳಿಗೆ ಸಮೀಪವಿರುವ ಹಳ್ಳಿಗಳಲ್ಲಿ ಕೆಲವು ಅಭ್ಯರ್ಥಿಗಳು ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸಿಕೊಳ್ಳುತ್ತಿದ್ದಾರೆ. ಇಲ್ಲಿನ ಮದ್ಯಕ್ಕಿಂತಲೂ ಗೋವಾದ ಮದ್ಯ ಅಗ್ಗ ದರವಾಗಿರುವುದಿಂದ ಅಲ್ಲಿಂದ ಮದ್ಯವನ್ನು ಅಕ್ರಮವಾಗಿ ಸಾಗಿಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. 

ಇನ್ನು ಕುರಿ ಮತ್ತು ಮೇಕೆಗಳ ಬೆಲೆ ಕೂಡ ದುಬಾರಿಯಾಗಿದೆ, ಈ ಹಿಂದೆ 15 ರಿಂದ 18 ಕೆಜಿ ತೂಕದ ಕುರಿಗಳನ್ನು ರೂ. 6,000 ರಿಂದ 8,000ಕ್ಕೆ ಮಾರಾಟ ಮಾಡಲಾಗುತ್ತಿತ್ತು. ಆದರೆ, ಇದೀಗ ಇವುಗಳ ಬೆಲೆ ರೂ.8 ಸಾವಿರದಿಂದ 12 ಸಾವಿರಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!